ಲಿಂಗದೇವರು ಹಳೆಮನೆ ರಂಗಾಯಣದ ನೂತನ ಸಾರಥಿ

ನಿಕಟ ಸಂಬಂಧ ನಾಟಕಕಾರ, ರಂಗ ನಿರ್ದೇಶಕರೂ ಆಗಿರುವ ಹಳೆಮನೆ ಅವರಿಗೆ ಆರಂಭದ ದಿನಗಳಿಂದಲೂ ರಂಗಾಯಣದ ಜತೆ ನಿಕಟ ಸಂಪರ್ಕವಿದೆ. ಬಿ.ವಿ.ಕಾರಂತರು ಸ್ಥಳ ಪರಿಶೀಲನೆಗೆ ಬಂದಾಗಿನಿಂದ ಒಂದಿಲ್ಲ ಒಂದು ರೀತಿಯ ಸಂಬಂಧ ಹೊಂದಿದವರು. ರಂಗ ಸಮಾಜ'ದ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯ ರಂಗ ಶಿಕ್ಷಣ ಕೇಂದ್ರದ ಗೌರವ ಪ್ರಾಂಶುಪಾಲರಾಗಿ,ಬಹುರೂಪಿ ನಾಟಕೋತ್ಸವ,ವಿಚಾರ ಸಂಕಿರಣಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪ್ರಸನ್ನ ಅವರು ನಿರ್ದೇಶಕರಾಗಿ ಬರುವ ಮುಂಚೆ ಸರಕಾರ ಹಳೆಮನೆ ಅವರನ್ನೇ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಂಗ ಸಮಾಜದ ಸದಸ್ಯತ್ವಕ್ಕೆ ರಾಜೀನಾಮೆಯನ್ನೂ ನೀಡಿದ್ದರು. ಆದರೆ, ಮಾತೃ ಸಂಸ್ಥೆ ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್)ನಿಯೋಜನೆ ಮೇಲೆ ಕಳುಹಿಸಲು ನಿರಾಕರಿಸಿತ್ತು. ನಂತರ ಪ್ರಸನ್ನ ನಿರ್ದೇಶಕರಾಗಿ ಬಂದರು. ಕೆಲವು ತಿಂಗಳ ಹಿಂದೆ ಹಳೆಮನೆ ಸಿಐಐಎಲ್ನಿಂದ ನಿವೃತ್ತರಾಗಿದ್ದಾರೆ.
ಕಲಾವಿದರ ಕ್ಷೇಮದ ನೆಲೆಯಲ್ಲಿ ನಿರ್ವಹಣೆ ನನಗಿದು ಆಕಸ್ಮಿಕ. ನಿರ್ದೇಶಕರಾಗುವಂತೆ ಹಲವು ಕಡೆಯಿಂದ ಒತ್ತಡ ಇದ್ದದ್ದು ನಿಜ. ಆದರೆ, ಈ ಸರಕಾರ ನನ್ನನ್ನು ನೇಮಿಸುತ್ತದೆ ಎಂಬ ನಂಬಿಕೆ ಇರಲಿಲ್ಲ. ಆದರೂ ಸರಕಾರ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಅದಕ್ಕೆ ಪೂರಕವಾಗಿ ಸ್ಪಂದಿಸುತ್ತೇನೆ. ಕಲಾವಿದರ ಕ್ಷೇಮ ಬಹುಮುಖ್ಯ. ಅವರನ್ನು ಒಡೆದು ಸಂಸ್ಥೆಯನ್ನು ಕಟ್ಟುವುದು ಅಸಾಧ್ಯ. ಒಳಿತಿನ ಆಶಯದ ಮೇಲೆಯೇ ರಂಗಸಂಸ್ಥೆಯನ್ನು ಕಟ್ಟುತ್ತೇನೆ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ನೇಮಕವಾಗಿರುವ ಲಿಂಗದೇವರು ಹಳೆಮನೆ ಹೇಳಿದ್ದಾರೆ.
ಬೆಂಗಳೂರಿನ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ನ ಛೇರ್ಮನ್ ಆಗಿ ನೇಮಕವಾಗಿದ್ದು, ಅಧಿಕಾರ ವಹಿಸಿಕೊಳ್ಳುವ ಸಿದ್ಧತೆಯಲ್ಲಿದ್ದೆ. ಈ ಮಧ್ಯೆ ರಾಜ್ಯ ಸರಕಾರ ರಂಗಾಯಣದ ಜವಾಬ್ದಾರಿ ವಹಿಸಿದೆ. ಈಗಿನ ಸಂದರ್ಭದಲ್ಲಿ ಎಲ್ಲಕ್ಕಿಂತ ರಂಗಾಯಣದ ಹಿತದೃಷ್ಟಿ ನನಗೆ ಮುಖ್ಯ ಎಂದರು. ಅಧಿಕಾರ ಸ್ವೀಕರಿಸಿದ ನಂತರ ಇತ್ತೀಚಿಗೆ ಸಂಸ್ಥೆಯಲ್ಲಿ ನಡೆದ ವಿದ್ಯಮಾನಗಳನ್ನು ಕೂಲಂಕಷವಾಗಿ ಪರಾಮರ್ಶಿಸಿ ನಂತರ ಮಾತನಾಡುತ್ತೇನೆ. ಸಂಸ್ಥೆ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುವುದು. ಎಲ್ಲಾ ಕಳಂಕಗಳನ್ನು ತೊಳೆದು ಹಿಂದಿನ ವೈಭವ ಮರುಕಳಿಸುವಂತೆ ಮಾಡುವುದು ಮೊದಲ ಕೆಲಸ ಎಂದು ಭರವಸೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications