ಲಿಂಗದೇವರು ಹಳೆಮನೆ ರಂಗಾಯಣದ ನೂತನ ಸಾರಥಿ

ನಿಕಟ ಸಂಬಂಧ ನಾಟಕಕಾರ, ರಂಗ ನಿರ್ದೇಶಕರೂ ಆಗಿರುವ ಹಳೆಮನೆ ಅವರಿಗೆ ಆರಂಭದ ದಿನಗಳಿಂದಲೂ ರಂಗಾಯಣದ ಜತೆ ನಿಕಟ ಸಂಪರ್ಕವಿದೆ. ಬಿ.ವಿ.ಕಾರಂತರು ಸ್ಥಳ ಪರಿಶೀಲನೆಗೆ ಬಂದಾಗಿನಿಂದ ಒಂದಿಲ್ಲ ಒಂದು ರೀತಿಯ ಸಂಬಂಧ ಹೊಂದಿದವರು. ರಂಗ ಸಮಾಜ'ದ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯ ರಂಗ ಶಿಕ್ಷಣ ಕೇಂದ್ರದ ಗೌರವ ಪ್ರಾಂಶುಪಾಲರಾಗಿ,ಬಹುರೂಪಿ ನಾಟಕೋತ್ಸವ,ವಿಚಾರ ಸಂಕಿರಣಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಪ್ರಸನ್ನ ಅವರು ನಿರ್ದೇಶಕರಾಗಿ ಬರುವ ಮುಂಚೆ ಸರಕಾರ ಹಳೆಮನೆ ಅವರನ್ನೇ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಂಗ ಸಮಾಜದ ಸದಸ್ಯತ್ವಕ್ಕೆ ರಾಜೀನಾಮೆಯನ್ನೂ ನೀಡಿದ್ದರು. ಆದರೆ, ಮಾತೃ ಸಂಸ್ಥೆ ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್)ನಿಯೋಜನೆ ಮೇಲೆ ಕಳುಹಿಸಲು ನಿರಾಕರಿಸಿತ್ತು. ನಂತರ ಪ್ರಸನ್ನ ನಿರ್ದೇಶಕರಾಗಿ ಬಂದರು. ಕೆಲವು ತಿಂಗಳ ಹಿಂದೆ ಹಳೆಮನೆ ಸಿಐಐಎಲ್ನಿಂದ ನಿವೃತ್ತರಾಗಿದ್ದಾರೆ.
ಕಲಾವಿದರ ಕ್ಷೇಮದ ನೆಲೆಯಲ್ಲಿ ನಿರ್ವಹಣೆ ನನಗಿದು ಆಕಸ್ಮಿಕ. ನಿರ್ದೇಶಕರಾಗುವಂತೆ ಹಲವು ಕಡೆಯಿಂದ ಒತ್ತಡ ಇದ್ದದ್ದು ನಿಜ. ಆದರೆ, ಈ ಸರಕಾರ ನನ್ನನ್ನು ನೇಮಿಸುತ್ತದೆ ಎಂಬ ನಂಬಿಕೆ ಇರಲಿಲ್ಲ. ಆದರೂ ಸರಕಾರ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಅದಕ್ಕೆ ಪೂರಕವಾಗಿ ಸ್ಪಂದಿಸುತ್ತೇನೆ. ಕಲಾವಿದರ ಕ್ಷೇಮ ಬಹುಮುಖ್ಯ. ಅವರನ್ನು ಒಡೆದು ಸಂಸ್ಥೆಯನ್ನು ಕಟ್ಟುವುದು ಅಸಾಧ್ಯ. ಒಳಿತಿನ ಆಶಯದ ಮೇಲೆಯೇ ರಂಗಸಂಸ್ಥೆಯನ್ನು ಕಟ್ಟುತ್ತೇನೆ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ನೇಮಕವಾಗಿರುವ ಲಿಂಗದೇವರು ಹಳೆಮನೆ ಹೇಳಿದ್ದಾರೆ.
ಬೆಂಗಳೂರಿನ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ನ ಛೇರ್ಮನ್ ಆಗಿ ನೇಮಕವಾಗಿದ್ದು, ಅಧಿಕಾರ ವಹಿಸಿಕೊಳ್ಳುವ ಸಿದ್ಧತೆಯಲ್ಲಿದ್ದೆ. ಈ ಮಧ್ಯೆ ರಾಜ್ಯ ಸರಕಾರ ರಂಗಾಯಣದ ಜವಾಬ್ದಾರಿ ವಹಿಸಿದೆ. ಈಗಿನ ಸಂದರ್ಭದಲ್ಲಿ ಎಲ್ಲಕ್ಕಿಂತ ರಂಗಾಯಣದ ಹಿತದೃಷ್ಟಿ ನನಗೆ ಮುಖ್ಯ ಎಂದರು. ಅಧಿಕಾರ ಸ್ವೀಕರಿಸಿದ ನಂತರ ಇತ್ತೀಚಿಗೆ ಸಂಸ್ಥೆಯಲ್ಲಿ ನಡೆದ ವಿದ್ಯಮಾನಗಳನ್ನು ಕೂಲಂಕಷವಾಗಿ ಪರಾಮರ್ಶಿಸಿ ನಂತರ ಮಾತನಾಡುತ್ತೇನೆ. ಸಂಸ್ಥೆ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುವುದು. ಎಲ್ಲಾ ಕಳಂಕಗಳನ್ನು ತೊಳೆದು ಹಿಂದಿನ ವೈಭವ ಮರುಕಳಿಸುವಂತೆ ಮಾಡುವುದು ಮೊದಲ ಕೆಲಸ ಎಂದು ಭರವಸೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications