ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿಗಾರಿಕೆ : ಸಿಬಿಐ ತನಿಖೆಗೆ ಸ್ಪಂದಿಸುವಂತೆ ಮನವಿ

By Staff
|
Google Oneindia Kannada News

Janardahn reddy
ಬೆಂಗಳೂರು, ನ. 26 : ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ಸಮಗ್ರವಾಗಿ ನಡೆಯಬೇಕೆಂದರೆ ರಾಜ್ಯ ಸರಕಾರವು ಕೇಂದ್ರದೊಂದಿಗೆ ಸಹಕರಿಸಬೇಕೆಂದು ಕೇಂದ್ರ ಗಣಿ ಸಚಿವ ಅಂಡಿಕ್ ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಆಂದ್ರಪ್ರದೇಶದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದೆ. ರಾಜ್ಯದ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಆರು ಗಣಿ ಕಂಪನಿಗಳನ್ನು ಕೇಂದ್ರ ಉನ್ನತಾಧಿಕಾರ ಸಮಿತಿ ಶಿಫಾರಸ್ಸಿನ ಮೇರೆಗೆ ಆಂಧ್ರಸರಕಾರ ರದ್ದುಗೊಳಿಸುವಂತೆ ಆದೇಶ ಹೊರಡಿಸಿದೆ.

ಸಿಬಿಐ ತನಿಖೆ ಸಮಗ್ರವಾಗಿ ನಡೆದು ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಕರ್ನಾಟಕ ನೆರವೂ ಸಹ ಅಗತ್ಯವಾಗಿದೆ. ಆದ್ದರಿಂದ ಸಿಬಿಐ ತನಿಖೆಗೆ ಸಹಕಾರ ನೀಡುವುದಾಗಿ ನಿಮ್ಮ ಸರಕಾರ ಕೇಂದ್ರಕ್ಕೆ ಪತ್ರ ಬರೆಯಲಿ ಎಂದು ಅಂಡಿಕ್ ಮನವಿ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ಬಂದ ಪತ್ರದ ಬಗ್ಗೆ ರಾಜ್ಯ ಸರಕಾರ ಸಹ ಪೂರಕ ಸ್ಪಂದಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X