ರಾಜಾಜಿನಗರ ಸ್ಲಮ್ ಮಾಯ: ಸುರೇಶ್ ಕುಮಾರ್

ಅವರು ಗುರುವಾರ ರಾಜಾಜಿನಗರದ ಇಂದಿರಾ ನಗರ ಕೊಳಚೆ ಪ್ರದೇಶದಲ್ಲಿ 163 ಮನೆಗಳ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಈ ಮನೆಗಳನ್ನು ಲಘುಭಾರ ನಿರ್ಮಾಣ (Light Weight Construction Method)ತಂತ್ರಜ್ಞಾನದ ಮೂಲಕ ನಿರ್ಮಿಸುತ್ತಿದ್ದು ಕರ್ನಾಟಕದಲ್ಲಿ ಇದು ಮೊತ್ತಮೊದಲ ಬಾರಿಗೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಪ್ರತಿಯೊಂದು ಮನೆಗೂ 1.8 ಲಕ್ಷ ರು. ವೆಚ್ಚವಾಗುತ್ತಿದ್ದು, ಇದು ಆರ್ಥಿಕವಾಗಿ ಹಿಂದುಳಿದ ಎಲ್ಲಾ ಜಾತಿ ಜನರಿಗೂ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಮನೆಯ ಫಲಾನುಭವಿಯು 21,600ರು.ಗಳನ್ನು ಭರಿಸಬೇಕಾಗಿದ್ದು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮಾತ್ರ 18,000 ರು. ಭರಿಸಬೇಕಾಗುತ್ತದೆ. ಈ ಪ.ಜಾತಿ ಮತ್ತು ಪಂಗಡದ ಜನರು ಭರಿಸಬೇಕಾದ ಹಣವನ್ನು ಬಿಬಿಎಂಪಿ ವತಿಯಿಂದ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಸದ್ಯದಲ್ಲೇ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ಕುಮಾರ್ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications