ಭ್ರಷ್ಟಾಚಾರ ಪೋಷಿಸುವ ವ್ಯವಸ್ಥೆ ನಮ್ಮದು, ಸಂತೋಷ ಹೆಗ್ಡೆ

ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಉತ್ತಮ ಆಡಳಿತ' ವಿಷಯ ಕುರಿತು ಗುರುವಾರ ನಡೆದ ಸಂವಾದ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭ್ರಷ್ಟಾಚಾರ ಎಸಗುವ ಅಧಿಕಾರಿಗಳನ್ನು ರಕ್ಷಿಸೋ ವ್ಯವಸ್ಥೆ ನಮ್ಮದು. ಹಾಗಾಗಿ, ಭ್ರಷ್ಟಾಚಾರ ಎಲ್ಲೆಡೆ ಇದೆ ಎಂದು ಹೇಳಿದರು. ಸಾಸಿವೆ ತರಲು ಸಾವಿಲ್ಲದ ಮನೆಯನ್ನು ಹುಡುಕಲು ಹೇಗೆ ಸಾಧ್ಯವಿಲ್ಲವೋ, ಅದೇ ರೀತಿ ಭ್ರಷ್ಟಾಚಾರ ರಹಿತ ಸರಕಾರಿ ಇಲಾಖೆಗಳನ್ನು ಹುಡುಕಲಾಗದು ಎನ್ನುತ್ತಿದ್ದಂತೆಯೇ, ಹಿಂದಿನ ಸಾಲಿನ ವಿದ್ಯಾರ್ಥಿಯೊಬ್ಬ ಲೋಕಾಯುಕ್ತ ಕಚೇರಿಯಲ್ಲಿ ?' ಎಂದು ಮೆಲುದನಿ ಯಲ್ಲಿ ಕೇಳಿದ. ತಕ್ಷಣ ಲೋಕಾಯುಕ್ತರು, ನಮ್ಮ ಕಚೇರಿಯನ್ನೂ ಬಿಟ್ಟಿಲ್ಲ' ಎಂದು ಒಪ್ಪಿಕೊಂಡರು.
ಸರಕಾರದ ವಿರುದ್ಧ ಅಸಮಾಧಾನ : ಅಕ್ರಮ ಗಣಿಗಾರಿಕೆ ಕುರಿತು ತಾವು ನೀಡಿರುವ ವರದಿ ಬಗ್ಗೆ ಯಾವುದೇ ಕ್ರಮಕೈಗೊಳ್ಳದ ರಾಜ್ಯ ಸರಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕಾಯುಕ್ತ, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ನಡವಳಿಕೆಯನ್ನೂ ಆಕ್ಷೇಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತ ವರದಿಯನ್ನು ಸರಕಾರಕ್ಕೆ ನೀಡಿದ್ದೇನೆ. ಅದರಲ್ಲಿ ಏನಿದೆ ಎಂಬುದನ್ನು ಮೊದಲು ನೋಡಲಿ. ಅದನ್ನು ಬಿಟ್ಟು, ಬೇರೆ-ಬೇರೆ ತನಿಖೆಗೆ ಆಗ್ರಹಿಸುತ್ತಿರುವುದು ಸರಿಯಲ್ಲ ಎಂದರು.
ಗಣಿಗಾರಿಕೆ ಮೂಲಕ ಸಂಪತ್ತು ಲೂಟಿ ಆಗುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಳ್ಳುವಾಗ, ಇದನ್ನು ಒಳ್ಳೆಯ ಆಡಳಿತ ಎಂದು ಹೇಗೆ ಕರೆಯುವುದು ? ನೆರೆ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಲು ಆಡಳಿತ ಪಕ್ಷದ ಶಾಸಕರೇ ಇರುವುದಿಲ್ಲ. ಕೇಳಿದ್ರೆ, ಗ್ರಾಮೀಣ ಅಭಿವೃದ್ಧಿಗೆ ಹೈದ್ರಾಬಾದ್ಗೆ ಹೋಗಿದ್ದೇವೆ ಎನ್ನುತ್ತಾರೆ. ಇದು ಆಡಳಿತವೇ ?' ಎಂದು ಪ್ರಶ್ನಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications