ಭ್ರಷ್ಟಾಚಾರ ಪೋಷಿಸುವ ವ್ಯವಸ್ಥೆ ನಮ್ಮದು, ಸಂತೋಷ ಹೆಗ್ಡೆ

ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಉತ್ತಮ ಆಡಳಿತ' ವಿಷಯ ಕುರಿತು ಗುರುವಾರ ನಡೆದ ಸಂವಾದ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭ್ರಷ್ಟಾಚಾರ ಎಸಗುವ ಅಧಿಕಾರಿಗಳನ್ನು ರಕ್ಷಿಸೋ ವ್ಯವಸ್ಥೆ ನಮ್ಮದು. ಹಾಗಾಗಿ, ಭ್ರಷ್ಟಾಚಾರ ಎಲ್ಲೆಡೆ ಇದೆ ಎಂದು ಹೇಳಿದರು. ಸಾಸಿವೆ ತರಲು ಸಾವಿಲ್ಲದ ಮನೆಯನ್ನು ಹುಡುಕಲು ಹೇಗೆ ಸಾಧ್ಯವಿಲ್ಲವೋ, ಅದೇ ರೀತಿ ಭ್ರಷ್ಟಾಚಾರ ರಹಿತ ಸರಕಾರಿ ಇಲಾಖೆಗಳನ್ನು ಹುಡುಕಲಾಗದು ಎನ್ನುತ್ತಿದ್ದಂತೆಯೇ, ಹಿಂದಿನ ಸಾಲಿನ ವಿದ್ಯಾರ್ಥಿಯೊಬ್ಬ ಲೋಕಾಯುಕ್ತ ಕಚೇರಿಯಲ್ಲಿ ?' ಎಂದು ಮೆಲುದನಿ ಯಲ್ಲಿ ಕೇಳಿದ. ತಕ್ಷಣ ಲೋಕಾಯುಕ್ತರು, ನಮ್ಮ ಕಚೇರಿಯನ್ನೂ ಬಿಟ್ಟಿಲ್ಲ' ಎಂದು ಒಪ್ಪಿಕೊಂಡರು.
ಸರಕಾರದ ವಿರುದ್ಧ ಅಸಮಾಧಾನ : ಅಕ್ರಮ ಗಣಿಗಾರಿಕೆ ಕುರಿತು ತಾವು ನೀಡಿರುವ ವರದಿ ಬಗ್ಗೆ ಯಾವುದೇ ಕ್ರಮಕೈಗೊಳ್ಳದ ರಾಜ್ಯ ಸರಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕಾಯುಕ್ತ, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ನಡವಳಿಕೆಯನ್ನೂ ಆಕ್ಷೇಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತ ವರದಿಯನ್ನು ಸರಕಾರಕ್ಕೆ ನೀಡಿದ್ದೇನೆ. ಅದರಲ್ಲಿ ಏನಿದೆ ಎಂಬುದನ್ನು ಮೊದಲು ನೋಡಲಿ. ಅದನ್ನು ಬಿಟ್ಟು, ಬೇರೆ-ಬೇರೆ ತನಿಖೆಗೆ ಆಗ್ರಹಿಸುತ್ತಿರುವುದು ಸರಿಯಲ್ಲ ಎಂದರು.
ಗಣಿಗಾರಿಕೆ ಮೂಲಕ ಸಂಪತ್ತು ಲೂಟಿ ಆಗುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಳ್ಳುವಾಗ, ಇದನ್ನು ಒಳ್ಳೆಯ ಆಡಳಿತ ಎಂದು ಹೇಗೆ ಕರೆಯುವುದು ? ನೆರೆ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಲು ಆಡಳಿತ ಪಕ್ಷದ ಶಾಸಕರೇ ಇರುವುದಿಲ್ಲ. ಕೇಳಿದ್ರೆ, ಗ್ರಾಮೀಣ ಅಭಿವೃದ್ಧಿಗೆ ಹೈದ್ರಾಬಾದ್ಗೆ ಹೋಗಿದ್ದೇವೆ ಎನ್ನುತ್ತಾರೆ. ಇದು ಆಡಳಿತವೇ ?' ಎಂದು ಪ್ರಶ್ನಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications