ಪಶ್ಚಿಮ ಘಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ

ಕೊಡಚಾದ್ರಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಗಣಿಗಾರಿಕೆ ಪುನರಾರಂಭ ಆಗಲಿದೆ ಎಂಬ ಸುದ್ದಿ ಕಪೋಲಕಲ್ಪಿತವಾಗಿದ್ದು, ಅರಣ್ಯ, ಪರಿಸರ ಮತ್ತು ಗಣಿ ಇಲಾಖೆಗಳೂ ಕೂಡ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದವರು ಹೇಳಿದರು. ಈ ಪ್ರದೇಶದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯ ವಿಷಯ ಸದ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು. ಫಿರ್ಯಾದುದಾರರು ನ್ಯಾಯಾಲಯದಲ್ಲಿ ಸದರಿ ಪ್ರದೇಶದಲ್ಲಿ ಈಗಾಗಲೇ ತೆಗೆದಿರಿಸಲಾಗಿದ್ದ 2 ಲಕ್ಷ ಟನ್ ಅದಿರನ್ನು ಸಾಗಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ವಾಸ್ತವದಲ್ಲಿ ಪರಿಸರವಾದಿಗಳು ಹೇಳುವಂತೆ ಇತ್ತೀಚಿನ ಭಾರೀ ಮಳೆಯಿಂದಾಗಿ ಇರಬಹುದಾದ ಅದಿರು ಇನ್ನಿಲ್ಲದಂತೆ ಕೊಚ್ಚಿಹೋಗಿದೆ ಎಂದವರು ಹೇಳಿದರು.
ಮೂಕಾಂಬಿಕ ಅಭಯಾರಣ್ಯ ಸೂಕ್ಷ್ಮ ಪ್ರದೇಶವಾಗಿದ್ದು, ಶರಾವತಿ ಕಣಿವೆ ಪರಿಸರ ಅಧ್ಯಯನದ ವರದಿಯು ಕೂಡ ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದು ತರವಲ್ಲ ಎಂದಿದೆ ಎಂದರು. ಅರಣ್ಯ, ಪರಿಸರ, ವನ್ಯ ಪ್ರಾಣಿಗಳ ಸಂರಕ್ಷಣೆ ಕುರಿತು ಪ್ರಾವಿಣ್ಯತೆ ಪಡೆದ ವಿಶೇಷ ವಿಜ್ಞಾನಿಗಳನ್ನು ಕರೆಸಿ ಪಶ್ಚಿಮ ಘಟ್ಟ - ಪ್ರದೇಶದ ಅಧ್ಯಯನ ನಡೆಸಿ, ಡಿಸೆಂಬರ್ 2ನೇ ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದರು. ಪಶ್ಚಿಮಘಟ್ಟ ನದಿಕಣಿವೆ ವಿಷಯದಲ್ಲೂ ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಮಹಾರಾಷ್ಟ್ರಗಳ ಸಂಸದರ ಸಭೆ ಕರೆದು ಅವರ ಸಲಹೆ - ಸೂಚನೆಯನ್ನು ಪಡೆಯುವಂತೆ ಕೇಂದ್ರದ ಅರಣ್ಯ ಹಾಗೂ ಪರಿಸರ ಮಂತ್ರಿಗಳನ್ನು ಅವರು ಒತ್ತಾಯಿಸಿದರು.
(ದಟ್ಸ್ ಕನ್ನಡವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications