ಪಶ್ಚಿಮ ಘಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ

ಕೊಡಚಾದ್ರಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಗಣಿಗಾರಿಕೆ ಪುನರಾರಂಭ ಆಗಲಿದೆ ಎಂಬ ಸುದ್ದಿ ಕಪೋಲಕಲ್ಪಿತವಾಗಿದ್ದು, ಅರಣ್ಯ, ಪರಿಸರ ಮತ್ತು ಗಣಿ ಇಲಾಖೆಗಳೂ ಕೂಡ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದವರು ಹೇಳಿದರು. ಈ ಪ್ರದೇಶದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯ ವಿಷಯ ಸದ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು. ಫಿರ್ಯಾದುದಾರರು ನ್ಯಾಯಾಲಯದಲ್ಲಿ ಸದರಿ ಪ್ರದೇಶದಲ್ಲಿ ಈಗಾಗಲೇ ತೆಗೆದಿರಿಸಲಾಗಿದ್ದ 2 ಲಕ್ಷ ಟನ್ ಅದಿರನ್ನು ಸಾಗಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ವಾಸ್ತವದಲ್ಲಿ ಪರಿಸರವಾದಿಗಳು ಹೇಳುವಂತೆ ಇತ್ತೀಚಿನ ಭಾರೀ ಮಳೆಯಿಂದಾಗಿ ಇರಬಹುದಾದ ಅದಿರು ಇನ್ನಿಲ್ಲದಂತೆ ಕೊಚ್ಚಿಹೋಗಿದೆ ಎಂದವರು ಹೇಳಿದರು.
ಮೂಕಾಂಬಿಕ ಅಭಯಾರಣ್ಯ ಸೂಕ್ಷ್ಮ ಪ್ರದೇಶವಾಗಿದ್ದು, ಶರಾವತಿ ಕಣಿವೆ ಪರಿಸರ ಅಧ್ಯಯನದ ವರದಿಯು ಕೂಡ ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದು ತರವಲ್ಲ ಎಂದಿದೆ ಎಂದರು. ಅರಣ್ಯ, ಪರಿಸರ, ವನ್ಯ ಪ್ರಾಣಿಗಳ ಸಂರಕ್ಷಣೆ ಕುರಿತು ಪ್ರಾವಿಣ್ಯತೆ ಪಡೆದ ವಿಶೇಷ ವಿಜ್ಞಾನಿಗಳನ್ನು ಕರೆಸಿ ಪಶ್ಚಿಮ ಘಟ್ಟ - ಪ್ರದೇಶದ ಅಧ್ಯಯನ ನಡೆಸಿ, ಡಿಸೆಂಬರ್ 2ನೇ ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದರು. ಪಶ್ಚಿಮಘಟ್ಟ ನದಿಕಣಿವೆ ವಿಷಯದಲ್ಲೂ ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಮಹಾರಾಷ್ಟ್ರಗಳ ಸಂಸದರ ಸಭೆ ಕರೆದು ಅವರ ಸಲಹೆ - ಸೂಚನೆಯನ್ನು ಪಡೆಯುವಂತೆ ಕೇಂದ್ರದ ಅರಣ್ಯ ಹಾಗೂ ಪರಿಸರ ಮಂತ್ರಿಗಳನ್ನು ಅವರು ಒತ್ತಾಯಿಸಿದರು.
(ದಟ್ಸ್ ಕನ್ನಡವಾರ್ತೆ)
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications