ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿಗಾರಿಕೆ ನಿಲ್ಲಿಸುವಂತೆ ಕೇಂದ್ರದಿಂದ ಆದೇಶ

By Staff
|
Google Oneindia Kannada News

Troubles rising for mine baron Janardhan Reddy
ನವದೆಹಲಿ, ಡಿ. 1 : ಸುಪ್ರೀಂಕೋರ್ಟ್ ನ ಉನ್ನತಾಧಿಕಾರ ಸಮಿತಿ ನೀಡಿದ್ದ ವರದಿಯನ್ನಾಧರಿಸಿ ಕರ್ನಾಟಕ ಪ್ರವಾಸೋಧ್ಯಮ ಸಚಿವ ಜನಾರ್ಧನ ರೆಡ್ಡಿ ಮಾಲೀಕತ್ವದ ಒಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಆರು ಗಣಿಗಳ ಕಾರ್ಯಾಚರಣೆಯನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಕೇಂದ್ರ ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಈ ಎಲ್ಲಾ ಗಣಿಗಳಿಗೆ ನೀಡಿದ್ದ ಪರಿಸರ ಮಂಜುರಾತಿಯನ್ನು ರದ್ದುಗೊಳಿಸಿ ಹೊಸ ಸಮೀಕ್ಷೆ ಮುಗಿಯುವವರೆಗೆ ಗಣಿಗಾರಿಕೆ ನಡೆಸುವಂತಿಲ್ಲ ಎಂದು ಕೇಂದ್ರ ಪರಿಸರ ಇಲಾಖೆ ಹೇಳಿಕೆ ನೀಡಿದೆ.

ಸರ್ವೋಚ್ಚ ನ್ಯಾಯಾಲಯ ಉನ್ನತಾಧಿಕಾರ ಸಮಿತಿ ತನ್ನ ಶಿಫಾರಸ್ಸನ್ನು ಸಂಬಂಧಪಟ್ಟ ರಾಜ್ಯ ಸರಕಾರ ಮತ್ತು ಪರಿಸರ ಇಲಾಖೆಗೆ ಈ ಹಿಂದೆ ನೀಡಿತ್ತು. ಇದಕ್ಕೆ ಕೂಡಲೇ ಸ್ಪಂದಿಸಿದ ಆಂಧ್ರಪ್ರದೇಶ ಸರಕಾರ ಓಬಳಾಪುರಂ ಮತ್ತು ಇತರ ಕಂಪೆನಿಗಳಿಗೆ ನೋಟಿಸ್ ಜಾರಿ ಮಾಡಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಆದೇಶ ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X