ವಿಷಮಯ ಉಪ್ಪಿಟ್ಟು ಸೇವಿಸಿದ ಮಕ್ಕಳು ಅಸ್ವಸ್ಥ

ಆಲ್ಕೊಳದ ರಿಮ್ಯಾಂಡ್ ಹೋಂನಲ್ಲಿ 34 ಜನ ಮಕ್ಕಳಿಗೆ ಇಂದು ಬೆಳಿಗ್ಗೆ ತಿಂಡಿರೂಪದಲ್ಲಿ ಉಪ್ಪಿಟ್ಟನ್ನು ನೀಡಲಾಯಿತು. ಉಪ್ಪಿಟ್ಟನ್ನು ಸೇವಿಸಿದ ತಕ್ಷಣವೇ ಮೂವರು ಮಕ್ಕಳು ವಾಂತಿ ಮಾಡಿಕೊಂಡರು. ನಂತರದಲ್ಲಿ ಉಳಿದ ಮಕ್ಕಳೂ ಸಹ ವಾಂತಿ ಮಾಡಕೊಳ್ಳತೊಡಗಿದರು. ಉಪ್ಪಿಟ್ಟನ್ನು ಸೇವಿಸಿ ಸಮೀಪದಲ್ಲಿರುವ ಗಾಡಿಕೊಪ್ಪ ಸರ್ಕಾರಿ ಶಾಲೆಗೆ ವಿದ್ಯಾಭ್ಯಾಸಕ್ಕೆಂದು ಹೊರಟಿದ್ದ ಸಂದರ್ಭದಲ್ಲಿ ಈ ಪ್ರಕರಣ ನಡೆದಿದೆ.
ಆಹಾರ ವಿಷಮಯವಾಗಿದ್ದಿದ್ದರಿಂದ ಮಕ್ಕಳು ವಾಂತಿ ಮಾಡಿಕೊಂಡರೆಂದು ತಿಳಿದುಬಂದಿದೆ. ತೀವ್ರವಾಗಿ ಅಸ್ವಸ್ಥಗೊಂಡ 10 ಮಕ್ಕಳೂ ಸೇರಿದಂತೆ ರಿಮ್ಯಾಂಡ್ ಹೋಂನ ಅಷ್ಟೂ ಮಕ್ಕಳಿಗೂ ಚಿಕಿತ್ಸೆಗೊಳಪಡಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇಡೀ ಪ್ರಕರಣದಲ್ಲಿ ರಿಮ್ಯಾಂಡ್ ಹೋಂನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಮೊದಲೇ ಸಮಾಜದಿಂದ ನಿರ್ಲಕ್ಷ್ಯಿತರಾಗಿರುವ ರಿಮ್ಯಾಂಡ್ ಹೋಂನಲ್ಲಿರುವ ಮಕ್ಕಳು ಅಧಿಕಾರಿಗಳ ನಿರ್ಲಕ್ಷ್ಯಕ್ಕೂ ಒಳಗಾಗಿದ್ದಾರೆ ಎಂಬುದಕ್ಕೆ ಈ ವಿಷಸೇರಿದ ಉಪ್ಪಿಟ್ಟೇ ಸಾಕ್ಷಿ ಒದಗಿಸುವಂತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications