ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಟ ಸಿ.ಆರ್.ಸಿಂಹಗೆ ವಿಶ್ವ ಮಾನವ ಪ್ರಶಸ್ತಿ

By Staff
|
Google Oneindia Kannada News

CR Simha
ಮೈಸೂರು, ಡಿ.3: ನಗರದ ದೇಜಗೌ ಟ್ರಸ್ಟ್‌ನ ವಿಶ್ವಮಾನವ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಟ ಸಿ.ಆರ್. ಸಿಂಹ ಹಾಗೂ ಸಾಹಿತಿ ಡಾ. ಗುರುಪಾದ ಮರಿಗುದ್ದಿ ಅವರು ಆಯ್ಕೆಯಾಗಿದ್ದಾರೆ. ಕುವೆಂಪು ಅವರ ಕುರಿತ ಏಕಪಾತ್ರಭಿನಯವನ್ನು ಸಿಆರ್ ಸಿಂಹ ಅವರು ಅಚ್ಚುಕಟ್ಟಾಗಿ ಅಭಿನಯಿಸಿ, ಜನಪ್ರಿಯತೆ ಗಳಿಸಿದ್ದಾರೆ.

ಪ್ರಶಸ್ತಿಯು ತಲಾ 5ಸಾವಿರ ರು. ನಗದು ಮತ್ತು ಫಲಕ ಒಳಗೊಂಡಿರುತ್ತದೆ. ಅಲ್ಲದೆ, ಶ್ರೀಮತಿ ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿಯನ್ನು ಸಾಹಿತಿ ಡಾ. ಕೆ.ಎನ್. ರತ್ನಮ್ಮ ಅವರಿಗೆ ನೀಡಲಾಗಿದೆ. ಪ್ರಶಸ್ತಿಯು20ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ನೀಡುವ ದಿ. ಎಚ್. ಕೆ. ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿಯನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಳಗಾವಿ ವರದಿಗಾರ ಡಾ. ಸರಜೂ ಕಾಟ್ಕರ್ ಅವರಿಗೆ ನೀಡಲಾಗಿದೆ.

ಪ್ರಶಸ್ತಿಯು 12 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಈ ಎಲ್ಲ ಪ್ರಶಸ್ತಿಗಳನ್ನು ಡಿ.29ರಂದು ಮೈಸೂರಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕುವೆಂಪು ವಿದ್ಯಾವರ್ಧಕ ಟ್ರಸ್ಟ್‌ನ ಕಾರ್‍ಯದರ್ಶಿ ಶಿವಸುಂದರ ಸತ್ಯೇಂದ್ರ ತಿಳಿಸಿದ್ದಾರೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X