ಹೆಬ್ಬಾಳ ಕ್ಷೇತ್ರಕ್ಕೆ 300 ಕೋಟಿ ರುಪಾಯಿ, ಕಟ್ಟಾ

ಸಂಜಯ್ ನಗರದ ಆರ್ಎಂವಿ ಪಾರ್ಕ್ನಲ್ಲಿ ಗ್ರಂಥಾಲಯ ಉದ್ಘಾಟನೆ ಹಾಗೂ ಕ್ಷೇತ್ರದ ಒಳಚರಂಡಿ ಕಾಮಗಾರಿಗಳ ಪ್ರಾರಂಭೋತ್ಸವವನ್ನು ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಹೆಬ್ಬಾಳ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರು ಹಾಗೂ ಸ್ಯಾನಿಟರಿ ಪೈಪುಗಳ ಬದಲಾವಣೆ, ರಸ್ತೆಗಳ ಅಗಲೀಕರಣ, ಡಾಂಬರೀಕರಣ, ಉದ್ಯಾನವನ ನಿರ್ಮಾಣ, ಮಳೆ ನೀರು ಚರಂಡಿಗಳ ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ಇಲ್ಲಿಯವರೆಗೆ, ಶೇ 75 ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.
ಇದಲ್ಲದೆ ಕುಡಿಯುವ ನೀರಿಗಾಗಿ 30 ಕೋಟಿ ರುಪಾಯಿ ಮಳೆನೀರು ಕಾಲುವೆಗಳನ್ನು ಕೊಳಚೆ ನೀರಿನಿಂದ ಮುಕ್ತಗೊಳಿಸಲು 40 ಕೋಟಿ ರುಪಾಯಿ ಯೋಜನೆ ರೂಪಿಸಿದ್ದು, ಬರುವ ವರ್ಷದ ಅಂತ್ಯದೊಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಗುತ್ತಿಗೆದಾರರ ಅಲಭ್ಯತೆಯಿಂದಾಗಿ ಕೆಲವು ಕಾಮಗಾರಿಗಳು ಕುಂಠಿತಗೊಂಡಿವೆ ಎಂದರು.
ವಾರ್ಡ್ಗಳ ಸರ್ವತೋಮುಖ ಅಭಿವೃದ್ಧಿ
ನಗರದ ಎಲ್ಲಾ 199 ವಾರ್ಡ್ಗಳಲ್ಲಿ ಸಹಾಯವಾಣಿ ಕೇಂದ್ರ, ಸ್ತ್ರೀ ಶಕ್ತಿ ಭವನ, 2 ಉದ್ಯಾನವನ, ಕಸ ಹಾಕಲು ಜಾಗ, ನೀರು ಶೇಖರಣ ಸ್ಥಳ ಮತ್ತು ಶೌಚಾಲಯಗಳ ನಿರ್ಮಾಣ ಸರ್ಕಾರದ ಗುರಿಯಾಗಿದೆ. ಸಹಾಯವಾಣಿ ಕೇಂದ್ರಗಳೊಂದಿಗೆ ಮಹಾನಗರ ಪಾಲಿಕೆಯ ಸಂಪರ್ಕ ಕಲ್ಪಿಸಲಾಗುವುದು ಹಾಗೂ ಕಸ ಹಾಕಲು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದರು. ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗೆ 22,000 ಕೋಟಿ ರುಪಾಯಿಗಳನ್ನು ತೊಡಗಿಸಲಾಗುವುದು ಎಂದರು.
ನನ್ನ ಹಸ್ತಕ್ಷೇಪವಿಲ್ಲ
ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಾಗಲೀ ಅಥವಾ ಅಧಿಕಾರಿಗಳನ್ನು ವೈಯುಕ್ತಿಕ ಕೆಲಸಗಳಿಗೆ ಉಪಯೋಗಿಸುವ ಕಾರ್ಯಗಳನ್ನು ನಾನೆಂದೂ ಮಾಡಿಲ್ಲ. ಒಂದು ಪಕ್ಷ ಯಾವುದೇ ವ್ಯಕ್ತಿ ಆಥವಾ ಅಧಿಕಾರಿಗಳಾಗಲಿ ತಪ್ಪೆಸಗಿದ್ದಾರೆಂದು ಅವರ ವಿರುದ್ಧ ದಾಖಲಾತಿಗಳನ್ನು ಒದಗಿಸಿದಲ್ಲಿ ಆ ಬಗ್ಗೆ ಕಠಿಣ ಕ್ರಮಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು.
ಸಮಾಜ ಕಟ್ಟುವಲ್ಲಿ ಸುಶಿಕ್ಷಿತರ ಪಾತ್ರ
ಸುಶಿಕ್ಷಿತರು ಆಡಳಿತ, ರಾಜಕೀಯ ಮತ್ತು ಸಾಮಾಜಿಕ ರಂಗಗಳಲ್ಲಿ ಭಾಗವಹಿಸಿದಲ್ಲಿ ಮಾತ್ರ ಉತ್ತಮ ಸಮಾಜವನ್ನು ಕಟ್ಟಲು ಸಾಧ್ಯ. ಚುನಾವಣೆಯಲ್ಲಿ ಕೇವಲ ಶೇ.35 ರಿಂದ 40 ರಷ್ಟು ಮತದಾನವಾಗುತ್ತಿದೆ. ಈ ಪ್ರಮಾಣವು ಹೆಚ್ಚಾಗಬೇಕು. ಕೊಳಚೆ ಪ್ರದೇಶದ ಜನರ ಸರ್ವಾಂಗೀಣ ಆಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕೆಂದು ಹಿರಿಯ ನಾಗರಿಕರಲ್ಲಿ ಸಚಿವರು ಮನವಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications