ಹೆಬ್ಬಾಳ ಕ್ಷೇತ್ರಕ್ಕೆ 300 ಕೋಟಿ ರುಪಾಯಿ, ಕಟ್ಟಾ

ಸಂಜಯ್ ನಗರದ ಆರ್ಎಂವಿ ಪಾರ್ಕ್ನಲ್ಲಿ ಗ್ರಂಥಾಲಯ ಉದ್ಘಾಟನೆ ಹಾಗೂ ಕ್ಷೇತ್ರದ ಒಳಚರಂಡಿ ಕಾಮಗಾರಿಗಳ ಪ್ರಾರಂಭೋತ್ಸವವನ್ನು ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಹೆಬ್ಬಾಳ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರು ಹಾಗೂ ಸ್ಯಾನಿಟರಿ ಪೈಪುಗಳ ಬದಲಾವಣೆ, ರಸ್ತೆಗಳ ಅಗಲೀಕರಣ, ಡಾಂಬರೀಕರಣ, ಉದ್ಯಾನವನ ನಿರ್ಮಾಣ, ಮಳೆ ನೀರು ಚರಂಡಿಗಳ ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ಇಲ್ಲಿಯವರೆಗೆ, ಶೇ 75 ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.
ಇದಲ್ಲದೆ ಕುಡಿಯುವ ನೀರಿಗಾಗಿ 30 ಕೋಟಿ ರುಪಾಯಿ ಮಳೆನೀರು ಕಾಲುವೆಗಳನ್ನು ಕೊಳಚೆ ನೀರಿನಿಂದ ಮುಕ್ತಗೊಳಿಸಲು 40 ಕೋಟಿ ರುಪಾಯಿ ಯೋಜನೆ ರೂಪಿಸಿದ್ದು, ಬರುವ ವರ್ಷದ ಅಂತ್ಯದೊಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಗುತ್ತಿಗೆದಾರರ ಅಲಭ್ಯತೆಯಿಂದಾಗಿ ಕೆಲವು ಕಾಮಗಾರಿಗಳು ಕುಂಠಿತಗೊಂಡಿವೆ ಎಂದರು.
ವಾರ್ಡ್ಗಳ ಸರ್ವತೋಮುಖ ಅಭಿವೃದ್ಧಿ
ನಗರದ ಎಲ್ಲಾ 199 ವಾರ್ಡ್ಗಳಲ್ಲಿ ಸಹಾಯವಾಣಿ ಕೇಂದ್ರ, ಸ್ತ್ರೀ ಶಕ್ತಿ ಭವನ, 2 ಉದ್ಯಾನವನ, ಕಸ ಹಾಕಲು ಜಾಗ, ನೀರು ಶೇಖರಣ ಸ್ಥಳ ಮತ್ತು ಶೌಚಾಲಯಗಳ ನಿರ್ಮಾಣ ಸರ್ಕಾರದ ಗುರಿಯಾಗಿದೆ. ಸಹಾಯವಾಣಿ ಕೇಂದ್ರಗಳೊಂದಿಗೆ ಮಹಾನಗರ ಪಾಲಿಕೆಯ ಸಂಪರ್ಕ ಕಲ್ಪಿಸಲಾಗುವುದು ಹಾಗೂ ಕಸ ಹಾಕಲು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದರು. ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗೆ 22,000 ಕೋಟಿ ರುಪಾಯಿಗಳನ್ನು ತೊಡಗಿಸಲಾಗುವುದು ಎಂದರು.
ನನ್ನ ಹಸ್ತಕ್ಷೇಪವಿಲ್ಲ
ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಾಗಲೀ ಅಥವಾ ಅಧಿಕಾರಿಗಳನ್ನು ವೈಯುಕ್ತಿಕ ಕೆಲಸಗಳಿಗೆ ಉಪಯೋಗಿಸುವ ಕಾರ್ಯಗಳನ್ನು ನಾನೆಂದೂ ಮಾಡಿಲ್ಲ. ಒಂದು ಪಕ್ಷ ಯಾವುದೇ ವ್ಯಕ್ತಿ ಆಥವಾ ಅಧಿಕಾರಿಗಳಾಗಲಿ ತಪ್ಪೆಸಗಿದ್ದಾರೆಂದು ಅವರ ವಿರುದ್ಧ ದಾಖಲಾತಿಗಳನ್ನು ಒದಗಿಸಿದಲ್ಲಿ ಆ ಬಗ್ಗೆ ಕಠಿಣ ಕ್ರಮಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು.
ಸಮಾಜ ಕಟ್ಟುವಲ್ಲಿ ಸುಶಿಕ್ಷಿತರ ಪಾತ್ರ
ಸುಶಿಕ್ಷಿತರು ಆಡಳಿತ, ರಾಜಕೀಯ ಮತ್ತು ಸಾಮಾಜಿಕ ರಂಗಗಳಲ್ಲಿ ಭಾಗವಹಿಸಿದಲ್ಲಿ ಮಾತ್ರ ಉತ್ತಮ ಸಮಾಜವನ್ನು ಕಟ್ಟಲು ಸಾಧ್ಯ. ಚುನಾವಣೆಯಲ್ಲಿ ಕೇವಲ ಶೇ.35 ರಿಂದ 40 ರಷ್ಟು ಮತದಾನವಾಗುತ್ತಿದೆ. ಈ ಪ್ರಮಾಣವು ಹೆಚ್ಚಾಗಬೇಕು. ಕೊಳಚೆ ಪ್ರದೇಶದ ಜನರ ಸರ್ವಾಂಗೀಣ ಆಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡಬೇಕೆಂದು ಹಿರಿಯ ನಾಗರಿಕರಲ್ಲಿ ಸಚಿವರು ಮನವಿ ಮಾಡಿದರು.
(ದಟ್ಸ್ ಕನ್ನಡ ವಾರ್ತೆ)
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications