ಗಣಿಲಾರಿಗಳ ಹಾವಳಿಗೆ ಬಸವಳಿದ ಜನತೆ

ನಗರದ ಯಾವ ರಸ್ತೆಯಲ್ಲಿಯೂ ನೆಟ್ಟಗೆ ಹೋಗಲು ಸಾಧ್ಯವಿಲ್ಲ. ಹೀಗಿದೆ ರಸ್ತೆಗಳ ಗುಣಮಟ್ಟ. ರಸ್ತೆಯಲ್ಲಿ ಸಾಗುವವರು ಧೂಳನ್ನು ಕುಡಿಯುತಾ, ಸುತ್ತಿ ಬಳಸಿ ಓಡಾಡಬೇಕಾಗಿದ್ದು, ವಾಹನ ಸವಾರರಿಗೆ, ಪಾದಚಾರಿಗಳಿಗೆ ಹೆಚ್ಚಿನ ಸಮಸ್ಯೆಯುಂಟಾಗಿದೆ. ಆದರೆ ಇದ್ಯಾವುದು ಜನಪ್ರತಿನಿಧಿಗಳಿಗೆ ಅರ್ಥವಾಗಿಲ್ಲ ಎಂದಲ್ಲಾ. ಯಾಕೋ ಜನತೆಯ ಮೇಲೆ ಸೇಡು ತೀರಿಸಿಕೊಳ್ಳುವಂತಿದೆ ಇವರ ವರ್ತನೆ. ಹೀಗಾಗಿ ನಗರದ ಯಾವ ರಸ್ತೆಯಲ್ಲಿ ಸಾಗಿದರೂ ಕಾಮಗಾರಿ ಪ್ರಗತಿಯಲ್ಲಿದೆ ಎಂಬ ಬರಹ. ಇಲ್ಲಿವೇ ಗುಂಡಿ-ಗೊಟರುಗಳಿಂದ ತುಂಬಿರುವ ರಸ್ತೆಗಳೇ ಎದುರಾಗುತ್ತದೆ.
ಇದರ ಜೊತೆಗೆ ನಗರದಲ್ಲಿ ಗಣಿ ಲಾರಿಗಳ ಹಾವಳಿ ಹೆಚ್ಚಾಗತೊಡಗಿದ್ದು, ನಗರದ ಮುಖ್ಯ ರಸ್ತೆಗಳಲ್ಲೇ ಯಾರನ್ನು ಲೆಕ್ಕಿಸದೆ ಗಣಿಲಾರಿಗಳು ಓಡಾಡತೊಡಗಿರುವುದು ನಿಜಕ್ಕೂ ಆಶ್ಚರ್ಯ ಉಂಟಾಗಿದೆ. ಏಕೆಂದರೆ ಗಣಿ ಲಾರಿಗಳಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಓಡಾಡಲು ನಿಷೇಧವಿದ್ದರೂ ಕೂಡ ದಿನನಿತ್ಯ ನಿಷೇಧವನ್ನೇ ಉಲ್ಲಂಘಿಸಿ ಓಡಾಡುತ್ತಿರುವುದನ್ನು ನೋಡಿದರೆ ಯಾಕೋ ಸಂಬಂಧಿಸಿದ ಇಲಾಖೆ ಮೇಲೆ ಅನುಮಾನ ಮೂಡುವುದು ಸಹಜ. ಜೊತೆಗೆ ಇಲಾಖೆ ಕಣ್ಣು ಮುಚ್ಚಿಕೊಂಡು ತುಕಡಿಸುತ್ತಿದೆಯೇ ಎಂದೆನಿಸದಿರದು.
ಅದರಲ್ಲೂ ಮುಖ್ಯವಾಗಿ ನಗರ ಬಸ್ ನಿಲ್ದಾಣವಿರುವ ತೀರ್ಥಹಳ್ಳಿ ಸಾಗರ ಮುಖ್ಯ ರಸ್ತೆಯಲ್ಲಿಯೇ ಗಣಿಲಾರಿಗಳು ಯರ್ರಾಬಿರ್ರಿ ಓಡಾಡುತ್ತಿರುವುದು ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಒಂದು ಕಡೆ ರಸ್ತೆ ಕಾಮಗಾರಿಯಿಂದ ಕಿರಿಕಿರಿ ಉಂಟಾಗುತ್ತಿದ್ದರೆ ಇನ್ನೊಂದು ಕಡೆ ಗಣಿಲಾರಿಗಳ ಹಾವಳಿಯಿಂದ ಸಮಸ್ಯೆ ತಲೆದೋರಿದೆ. ಅದರಲ್ಲೂ ಮುಖ್ಯವಾಗಿ ಬಸ್ಸ್ಟ್ಯಾಂಡ್ ಸುತ್ತಮುತ್ತ ಅತ್ಯಧಿಕ ವಾಹನ ಸಂಚಾರವಿರುವ ಪ್ರದೇಶವಾಗಿದ್ದು, ಗಣಿ ಲಾರಿಗೆ ಈ ಭಾಗದಲ್ಲಿ ಓಡಾಡಲು ಮುಖ್ಯ ಅವಕಾಶ ನೀಡಿರುವುದು ಯಾಕೆ? ಎಂಬುದು ದಾರಿಹೋಕರ ಪ್ರಶ್ನೆ.
ಮೊದಲೇ ನಗರದ ರಸ್ತೆಗಳು ಚಿಂತಾಜನಕ ಸ್ಥಿತಿಯಲ್ಲಿದೆ. ಇದರ ಜೊತೆಗೆ 10-12 ಚಕ್ರದ ಹೆಣಭಾರದ ಗಣಿಲಾರಿಗಳನ್ನು ಓಡಾಡಲು ಬಿಟ್ಟಿರುವುದರಿಂದ ರಸ್ತೆಗಳು ಹಾಳಾಗುವುದಿಲ್ಲವೇ? ಜೊತೆಗೆ ಟ್ರಾಫಿಕ್ ನಿಯಮ ಗಣಿಲಾರಿಗಳಿಗೆ ಇಲ್ಲವೇ? ಎಂಬ ಪ್ರಶ್ನೆ ಎದುರಾದರೂ ಗಣಿಲಾರಿಗಳು ಓಡಾಡಲು ಮುಕ್ತ ಅವಕಾಶ ಮಾಡಿಕೊಟ್ಟಿರುವುದು ಏಕೋ ತಿಳಿಯದಾಗಿದೆ.
ಈ ರೀತಿ ಸಂಚಾರ ಉಲ್ಲಂಘನೆ ಮಾಡಿ ಮುಖ್ಯರಸ್ತೆಗಳಲ್ಲೇ ರೊಯ್ಯಂದು ಸಾಗುವ ಗಣಿಲಾರಿಗಳ ಮೇಲಿನ ಪ್ರೀತಿ ಬಿಟ್ಟು, ಕಡಿವಾಣ ಹಾಕಲು ಸಂಬಂಧಿಸಿದ ಇಲಾಖೆ ಮುಂದಾಗಬಹುದಲ್ಲ?
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications