ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ರೆಡ್ಡಿ ಸಹೋದರರಿಂದ ಸಾವಿರಾರು ಕೋಟಿ ಲೂಟಿಯಾಗುತ್ತಿದೆ. ಸರಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಅರಣ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐಗೆ ತನಿಖೆಗೆ ಒಪ್ಪಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು, ಅಧಿಕಾರವನ್ನು ಉಳಿಸಿಕೊಳ್ಳಲು ರಾಜ್ಯದ ಜನತೆಗೆ ದ್ರೋಹ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ನಮ್ಮ ಬಳಿ ದಾಖಲೆಗಳಿವೆ. ಅನೇಕ ವರದಿಗಳಿವೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಸತ್ಯ . ಇಷ್ಟೆಲ್ಲಾ ಆಧಾರಗಳಿದ್ದರೂ ರಾಜ್ಯ ಸರಕಾರ ಮೌನ ವಹಿಸಿರುವುದರ ವಿರುದ್ಧ ಸಿದ್ದು ಗುಡುಗಿದರು.
ಶ್ರೀರಾಮುಲು, ಜನಾರ್ದನರೆಡ್ಡಿ ಹಾಗೂ ಸೋಮಶೇಖರ ರೆಡ್ಡಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಆಗ್ರಹಿಸಿದರು. ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳು ಶಾಮೀಲಾಗಿದ್ದಾರೆ ಎಂಬ ಸಂದೇಹ ನಮಗೆ ಬರುತ್ತಿದೆ. ಸಂವಿಧಾನಬದ್ಧ ತನಿಖೆ ನಡೆಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ರಾಜ್ಯಸರಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ದೇಶಪಾಂಡೆ ಪ್ರತಿಭಟಿಸಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರಕಾರದ ವಿರುದ್ಧ ತಿರುಗಿಬಿದ್ದರು. ರಾಜ್ಯದ ಸಂಪತ್ತ ಲೂಟಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದರು. ಇದೀಗ ಇಲ್ಲ ಎನ್ನುತ್ತಿದ್ದಾರೆ. ಮುಖ್ಯಮಂತ್ರಿಗಳು ಅಸಂಬದ್ಧ ಹೇಳಿಕೆಗಳನ್ನು ಕೊಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು ರಾಜ್ಯದ ಹಿತ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಪ್ರತಿಭಟನೆಯಲ್ಲಿ ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಿಸಿರುವ ಬಗ್ಗೆಯೂ ವಿರೋಧ ವ್ಯಕ್ತವಾಯಿತು.
ಮುಖ್ಯಮಂತ್ರಿ ಪ್ರತಿಕ್ರಿಯೆ
ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆ ವಿಷಯವನ್ನು ವಿಧಾನಸಭೆ ಅಧಿವೇಷನದಲ್ಲಿ ಚರ್ಚಿಸಲಿದ್ದೇವೆ. ಸಂಪೂರ್ಣ ವಿವರಗಳನ್ನು ಸದನಕ್ಕೆ ಕೊಡುತ್ತೇನೆ. ಆ ಸಂದರ್ಭದಲ್ಲಿ ಸರಕಾರ ಪಾರದರ್ಶಕವಾಗಿ ಎಲ್ಲವನ್ನು ಸಭೆಗೆ ತಿಳಿಸಲಿದೆ ಎಂದು ಹೇಳಿದರು. ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಸಹಕರಿಸುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications