ಮುಸ್ಲಿಂ ಮಹಿಳೆ ಇದ್ದತ್ ಬಳಿಕವೂ ಜೀವನಾಂಶಕ್ಕೆ ಅರ್ಹ

ಇಮ್ರಾನ್ ಖಾನ್ ಎಂಬಾತ ತನ್ನ ವಿಚ್ಛೇದಿತ ಪತ್ನಿ ಶಬನಾ ಭಾನು ಜೀವನಾಂಶಕ್ಕೆ ಅರ್ಹಳಲ್ಲ ಎಂದು ಮುಸ್ಲಿಂ ಮಹಿಳಾ ಹಕ್ಕು ಕಾಯ್ಕೆ ಪ್ರಕಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಇದ್ದತ್ ಅವಧಿ ಬಳಿಕ ಆಕೆ ಯಾವುದೇ ಜೀವನಾಂಶಕ್ಕೆ ಬಾಧ್ಯಳಲ್ಲ ಎಂದು ಆತ ವಾದಿಸಿದ್ದ. ಇದಕ್ಕೆ ಪೂರಕವಾಗಿ ಶಬಾನು ಪ್ರಕರಣವನ್ನು ಉಲ್ಲೇಖಿಸಿದ್ದ.
ಈ ಸಂಬಂಧ ವಿಚಾರಣೆ ನಡೆಸಿದ ಬಿ.ಸುದರ್ಶನ್ ರೆಡ್ಡಿ ಹಾಗೂ ದೀಪಕ್ ವರ್ಮಾ ಅವರನ್ನೊಳಗೊಂಡ ನ್ಯಾಯಪೀಠ ಆತನ ವಾದವನ್ನು ತಳ್ಳಿಹಾಕಿ ಮಹತ್ವದ ತೀರ್ಪನ್ನು ನೀಡಿದೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 125 ಹಾಗೂ ಕುಟುಂಬ ನ್ಯಾಯಾಲಯಗಳ ಕಾಯ್ದೆ 1994 ಸೆಕ್ಷನ್ 7ರ ಪ್ರಕಾರ ಮುಸ್ಲಿಂ ಮಹಿಳೆಯೂ ಮರು ಮದುವೆಯಾಗುವ ತನಕ ಜೀವನಾಂಶ ಪಡೆಯಲು ಹಕ್ಕುದಾರಳು ಎಂದು ಸುಪ್ರೀಂ ಕೋಟ್ ತೀರ್ಪನ್ನು ನೀಡಿದೆ.
ಸಿಆರ್ ಪಿಸಿಯ ಸೆಕ್ಷನ್ 125ರ ಪ್ರಕಾರ ಜೀವನಾಂಶವು ಕೇವಲ ಇದ್ದತ್ ಅವಧಿಗೆ ಮಾತ್ರ ಸೀಮಿತವಲ್ಲ. ಎಲ್ಲಿಯವರೆಗೂ ಮರುಮದುವೆಯಾಗುವುದಿಲ್ಲವೊ ಅಲ್ಲಿಯ ತನಕ ತನ್ನ ಮಾಜಿ ಪತಿಯಿಂದ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಬಹುದು ಎಂದು ನ್ಯಾಯಪೀಠ ಹೇಳಿದೆ.
(ಏಜೆನ್ಸೀಸ್)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications