ಎಜಿ ಗಲ್ಲಿಗೇರಿಸಿ ಹೇಳಿಕೆಗೆ ಬದ್ಧ, ಎಚ್ಡಿಕೆ

ಜೆಡಿಎಸ್ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಎಂಐಸಿ ಯೋಜನೆ ಕುರಿತು ಸರಕಾರದ ಪರವಾಗಿ ಸುಪ್ರೀಂಕೋರ್ಟ್ಗೆ ಸುಳ್ಳು ಪ್ರಮಾಣಪತ್ರವನ್ನು ಹಾರನಹಳ್ಳಿ ನೀಡಿದ್ದಾರೆ. ಎಜಿ ಕಾನೂನನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕೇ ಹೊರತು, ಕಾನೂನುಬಾಹಿರ ಕೆಲಸಕ್ಕೆ ಪ್ರೋತ್ಸಾಹ ನೀಡಬಾರದು. ಮಾತ್ರವಲ್ಲ, ಇದನ್ನು ಪ್ರಶ್ನಿಸುವ. ಟೀಕಿಸುವ ಹಕ್ಕು ನಾಡಿನ ಜನತೆಗೆ ಇದೆ ಎಂದರು. ಎಜಿ ಕುರಿತು ನೀಡಿರುವ ಹೇಳಿಕೆ ಜವಾಬ್ದಾರಿಯುತವಾಗಿಯೇ ಇದೆ ಎಂದು ಸ್ಪಷ್ಟಪಡಿಸಿದರು.
ಎಚ್ಚರಿಸುವ ಕೆಲಸ : ಕಾನೂನು ಕುರಿತಂತೆ ಸರಕಾರ ತಪ್ಪು ಹೆಜ್ಜೆ ಇರಿಸಿದಾಗ ಎಜಿ ಎಚ್ಚರಿಸುವ ಕೆಲಸ ಮಾಡಬೇಕು. ಆದರೆ, ಬಿಎಂಐಸಿ ವಿಚಾರದಲ್ಲಿ ಹಾರನಹಳ್ಳಿ ಒತ್ತಡಕ್ಕೆ ಮಣಿದು, ಸುಪ್ರೀಂ ಕೋರ್ಟ್ಗೆ ಭೂ ಕಬಳಿಕೆಗೆ ಒತ್ತಾಸೆ ನೀಡುವಂತ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ವಕೀಲರ ಪರಿಷತ್ ಹೇಳಿದರೆ ಹೇಗೆ ಎಂದು ಪ್ರಶ್ನಿಸಿದರು.
ವ್ಯವಹಾರ : ನೈಸ್ ಆರಂಭಗೊಂಡು 14 ವರ್ಷ ಕಳೆದಿದೆ. ಆದರೆ, ಈವರೆಗೆ ಸಂಸ್ಥೆ ಎಷ್ಟು ಕಿಮೀ ರಸ್ತೆ ನಿರ್ಮಿಸಿದೆ ? ಎಲ್ಲೆಲ್ಲಿ ಈ ರಸ್ತೆ ಹಾದುಹೋಗಲಿದೆ? ಇದಕ್ಕೆ ಎಷ್ಟು ಭೂಮಿ ಬೇಕು? ಎಂಬ ವಿವರವನ್ನು ಬಿಎಂಐಸಿ ಈವರೆಗೆ ಸರಕಾರಕ್ಕೆ ನೀಡಿಲ್ಲ. 110 ಕಿಮೀ ಉದ್ದದ ರಸ್ತೆಗೆ 1.7 ಲಕ್ಷ ಎಕರೆ ಭೂ ಸ್ವಾಧೀನ ಮಾಡಿಕೊಳ್ಳುವ ಅಗತ್ಯವೇನಿದೆ? ಬಿಎಂಐಸಿ ಹೆಸರಿನಲ್ಲಿ 50 ಸಾವಿರ ಕೋಟಿ ಅವ್ಯವಹಾರ ನಡೆದಿದೆ. ಇದಕ್ಕೆ ಕುಮ್ಮಕ್ಕು ನೀಡುವ ಮುಖ್ಯಮಂತ್ರಿ ಯಡಿಯೂರಪ್ಪ, ಬಿಎಂಐಸಿ ಎಲ್ಲಿ, ಎಷ್ಟೇ ಜಾಗ ಕೇಳಿದರೂ ಒದಗಿಸುವಂತೆ ಎಲ್ಲ ಇಲಾಖೆಗೆ ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಿದರು.
ವಕೀಲರು ಇತ್ತ ಗಮನ ನೀಡಲಿ : ಬಿಎಂಐಸಿಯಿಂದ ಸಾವಿರಾರು ರೈತರು ಮತ್ತು ಜನರ ಜಮೀನು, ಮನೆ ಕೈಬಿಟ್ಟು ಹೋಗಿದೆ. ಇವರೆಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ತಮ್ಮ ಸಂಕಷ್ಟ ಹಂಚಿಕೊಳ್ಳಲು ಮತ್ತು ಬಿಎಂಐಸಿಯ ಅವ್ಯವಹಾರದ ಬಗ್ಗೆ ಪ್ರತಿಭಟಿಸಲು, ಡಿ.6ರಂದು ರೇಸ್ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಎದುರು ರೈತರು ಸಭೆ ನಡೆಸಲಿದ್ದಾರೆ. ವಕೀಲರ ಪರಿಷತ್ತಿನ ಪದಾಧಿಕಾರಿಗಳಿಗೆ ನಾಡಿನ ಬಗ್ಗೆ ನಿಜವಾದ ಕಾಳಜಿ ಇದ್ದರೆ, ನನ್ನನ್ನು ಕ್ಷಮೆ ಕೋರುವಂತೆ ಆಗ್ರಹಿಸುವ ಬದಲು ಸಭೆಯಲ್ಲಿ ಪಾಲ್ಗೊಂಡು ರೈತರ ನೋವನ್ನು ತಿಳಿಯುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
(ಸ್ನೇಹಸೇತು: ವಿಜಯಕರ್ನಾಟಕ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications