ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

ಸಿಬಿಐ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೊಂದು ಪೀಕಲಾಟ ಶುರುವಾಗಿದ್ದು, ಸಂಪುಟದಿಂದ ರೆಡ್ಡಿಯನ್ನು ಕೈಬಿಡಬೇಕೆ, ಬೇಡವೇ ಎಂದು ನಿರ್ಧರಿಸುವುದೇ ದೊಡ್ಡ ಪ್ರಶ್ನೆಯಾಗಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಯಾರ ಮೇಲೆಯೂ ಆರೋಪಗಳಿಲ್ಲ. ಅಲ್ಲದೇ ಯಾರನ್ನೂ ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರ ಹೇಳಿದ್ದಾರೆ.
ಜನಾರ್ದನ ರೆಡ್ಡಿ ಮೇಲೆ ಸಿಬಿಐ ಕೇಸ್ ದಾಖಲಿಸಿ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದರೆ, ಅವರು ನೈತಿಕತೆವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಧನಂಜಯ್ ಕುಮಾರ್ ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ್ದರು. ನಂತರ ಅವರು ತಮ್ಮ ಮಾತನ್ನು ಬದಲಿಸಿರುವುದು ಬೇರೆ ವಿಷಯ.
ಸಚಿವರಾದ ಜನಾರ್ದನರರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದನ್ನು ದೃಢೀಕರಿಸಿರುವ ಸಿಬಿಐ ತಂಡ ಅತಿಕ್ರಮಣ, ಅಕ್ರಮ ಗಣಿ ಸಂಗ್ರಹದ ಆರೋಪದ ಮೇಲೆ ವಿಶೇಷ ನ್ಯಾಯಾಲಯದಲ್ಲಿ ಅರಣ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ನಿಯಮದಡಿಯಲ್ಲಿ ಪ್ರಕರಣ ದಾಖಲಿಸಿದೆ.
ರೆಡ್ಡಿ ಸಹೋದರರ ಗಣಿ ಕಂಪನಿಗಳು ಗಡಿ ಉಲ್ಲಂಘಿಸಿ ಕಾನೂನು ಬಾಹಿರವಾಗಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮತ್ತು ಎಚ್ ಸಿದ್ದಾಪುರ ಗ್ರಾಮ ಹಾಗೂ ಬಳ್ಳಾರಿಯಲ್ಲೂ ಕಾನೂನು ಉಲ್ಲಂಘಿಸಿರುವುದು ಪತ್ತೆಯಾಗಿದೆ. ತನಿಖೆ ಮುಗಿಯುವವರೆಗೂ ಬಳ್ಳಾರಿ ಬಿಟ್ಟು ಬೇರಡೆ ತೆರಳದಂತೆ ಸಚಿವ ಜನಾರ್ದನರೆಡ್ಡಿಗೆ ಸಿಬಿಐ ತಾಕೀತು ಮಾಡಿದೆ ಎನ್ನಲಾಗಿದೆ.
ಅತ್ತ ಸಿಬಿಐ ತನಿಖೆ ಆರಂಭ ಇನ್ನೊಂದಡೆ ರೆಡ್ಡಿ ಒಡೆತನದ ಮೈನಿಂಗ್ ಕಂಪನಿಗಳ ಕಚೇರಿ, ಎನ್ನೋಬಲ್ ಇಂಡಿಯಾ ಕಚೇರಿ, ಈ ನಮ್ಮ ಕನ್ನಡ ನಾಡು ಪತ್ರಿಕಾ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳು, ಕಾಗದ ಪತ್ರಗಳ, ವ್ಯಾಪಾರ ವಹಿವಾಟಿನ ಕಡಿತಗಳ ಪರಿಶೀಲನೆ ನಡೆಸಿದ್ದಾರೆ. 150 ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications