ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಕೇಂದ್ರ ಅಸ್ತು

ಪ್ರತ್ಯೇಕ ತೆಲಂಗಾಣ ಚಳವಳಿಗೆ ಸಂಬಂಧಿಸಿದ್ದ ನಾಯಕರು, ವಿದ್ಯಾರ್ಥಿಗಳು ಮತ್ತು ಇತರರ ವಿರುದ್ಧ ಹೂಡಲಾದ ಎಲ್ಲ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಆಂಧ್ರಪ್ರದೇಶ ಮುಖ್ಯಮಂತ್ರಿ ರೋಸಯ್ಯ ಅವರಿಗೆ ಮನವಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ತಾನು ಅಗತ್ಯ ಕ್ರಮಕೈಗೊಳ್ಳುವುದಾಗಿ ಸಿಎಂ ರೋಸಯ್ಯ ಕೇಂದ್ರಕ್ಕೆ ಭರವಸೆ ನೀಡಿದ್ದಾರೆ.
ಚಂದ್ರಶೇಖರರಾವ್ ಅವರ ಆರೋಗ್ಯದ ಬಗ್ಗೆ ನಮಗೆ ಕಳವಳವಿದೆ. ಉಪವಾಸವನ್ನು ತಕ್ಷಣ ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ಸಾಮಾನ್ಯ ಸ್ಥಿತಿ ಸ್ಥಾಪನೆಗೆ ನೆರವಾಗಲು ತಮ್ಮ ಚಳವಳಿ ಹಿಂತೆಗೆದುಕೊಳ್ಳುವಂತೆ ನಾವು ಎಲ್ಲ ವಿದ್ಯಾರ್ಥಿಗಳಿಗೆ ಕೂಡ ಮನವಿ ಮಾಡಿಕೊಳ್ಳುತ್ತೇವೆ ಎಂದು ಚಿದಂಬರಂ ಹೇಳಿದರು.
(ಏಜನ್ಸೀಸ್)












Click it and Unblock the Notifications