ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪ್ಪಳಿಸಿದ ಕಾಪ್ಟರ್, ಪ್ರತಿಭಾ ಪಾಟೀಲ್ ಪಾರು

By Staff
|
Google Oneindia Kannada News

Pratibha Patil
ಭುವನೇಶ್ವರ, ಡಿ. 10 : ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹಾಗೂ ಅವರ ಪತಿ ದೇವಿಸಿಂಗ್ ಶೇಖಾವತ್ ಮತ್ತು ಒರಿಸ್ಸಾ ರಾಜ್ಯಪಾಲ ಎಂ ಸಿ ಭಂಡಾರಿ ಬುಧವಾರ (ನ 9) ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಮೂವರು ಗಣ್ಯರು ಪ್ರಯಾಣಿಸುತ್ತಿದ್ದ ವಾಯುಪಡೆ ಹೆಲಿಕಾಪ್ಟರ್ ರೆಕ್ಕೆಗಳು ಭುವನೇಶ್ವರ ವಿಮಾನ ನಿಲ್ದಾಣದ ಶೆಡ್ ಗೆ ಅಪ್ಪಳಿಸಿ ಹಾನಿಗೊಂಡಿವೆ.

ಪ್ರತಿಭಾ ಪಾಟೀಲ್ ಪುರಿಯಲ್ಲಿ ಕಾರ್ಯಕ್ರಮ ಮುಗಿಸಿ ಭುವನೇಶ್ವರಕ್ಕೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. 16 ಆಸನಗಳ ಈ ಹೆಲಿಕಾಪ್ಟರ್ ನ ಮೂರು ರೆಕ್ಕೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ರಾಷ್ಟ್ರಪತಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಇಳಿಯುವ ಸ್ಥಳವನ್ನು ವಾಯುಪಡೆ ಅಧಿಕಾರಿಗಳೇ ಆಯ್ಕೆ ಮಾಡಿದ್ದರು. ಈ ಘಟನೆ ಭದ್ರತಾ ಲೋಪ ಎಂದು ಪರಿಗಣಿಸಿರುವ ಆಡಳಿತ ತನಿಖೆಗೆ ಆದೇಶ ನೀಡಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X