ತೆಲಂಗಾಣ ವಿರೋಧಿಸಿ 70 ಶಾಸಕರು ರಾಜೀನಾಮೆ

ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರರಾವ್ ನೇತೃತ್ವದಲ್ಲಿ ನಡೆದ 11 ದಿನಗಳ ಅಮರಣಾಂತ ಹೋರಾಟಕ್ಕೆ ಮಣಿದ ಕೇಂದ್ರ ಕೊನೆಗೂ ತೆಲಂಗಾಣ ರಾಜ್ಯಕ್ಕೆ ಒಪ್ಪಿಗೆ ಸೂಚಿಸಿವೆ. ಕೇಂದ್ರದ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಇತ್ತ ಹೈದರಾಬಾದ್ ನಲ್ಲಿ ಕಾಂಗ್ರೆಸ್ 39, ತೆಲುಗು ದೇಶಂ 38, ಪ್ರಜಾರಾಜ್ಯಂ 13 ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಪ್ರತ್ಯೇಕ ರಾಜ್ಯದ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಒತ್ತಡ ಹೇರುತ್ತಿದ್ದಾರೆ. ಮುಖ್ಯವಾಗಿ ಕರಾವಳಿ ಆಂಧ್ರ, ರಾಯಲುಸೀಮೆ ಶಾಸಕರು ಆಂಧ್ರಪ್ರದೇಶ ಇಬ್ಭಾಗವಾಗುವುದನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.
ಪರಿಸ್ಥಿತಿ ಅರಿತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಸಂಸದರು ನವದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಕೇಂದ್ರದ ನಿರ್ಧಾರಕ್ಕೆ ವಿರೋಧಿಸಿದ್ದು, ನೂತನ ರಾಜ್ಯಕ್ಕೆ ವಿಧಾನಸಭೆಯಲ್ಲಿ ಮಂಡಿಸುವ ನಿಲುವಳಿಯನ್ನು ವಿರೋಧಿಸುವುದಾಗಿ ಹೇಳಿದ್ದಾರೆ. ಅತ್ತ ತೆಲಂಗಾಣ ರಾಜ್ಯ ಘೋಷಣೆ ಮಾಡುವುದಾಗಿ ಕೇಂದ್ರ ಹೇಳುತ್ತಿದ್ದಂತೆಯೇ ಆ ಪ್ರದೇಶದ 10 ಜಿಲ್ಲೆಗಳಲ್ಲಿ ಹಬ್ಬ ವಾತಾವರಣ ಮನೆ ಮಾಡಿದೆ.
(ಏಜನ್ಸೀಸ್)
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications