ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗಣಿ ನಿಷೇಧಕ್ಕೆ ತಡೆ, ರೆಡ್ಡಿ ಕೊಂಚ ನಿರಾಳ
ಸುಪ್ರಿಂಕೋರ್ಟ್ ನಿಂದ ನೇಮಕವಾದ ಕೇಂದ್ರ ಉನ್ನತಾಧಿಕಾರ ಸಮಿತಿ ಶಿಫಾರಸ್ಸಿನ ಮೇರೆಗೆ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿ ನವೆಂಬರ್ 25 ರಂದು ಆಂಧ್ರ ಸರಕಾರ ಆದೇಶ ಹೊರಡಿಸಿತ್ತು. ಹೊಸದಾಗಿ ಅದಿರು ತೆಗೆಯುವುದಷ್ಟೇ ಅಲ್ಲ. ಈ ಹಿಂದೆ ಸಂಗ್ರಹಣೆ ಮಾಡಿದ್ದ ಅದಿರು ಸಾಗಣೆಗೂ ನಿಷೇಧ ಹೇರಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಒಎಂಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.
ನ್ಯಾಯಾಲಯದ ಆದೇಶದಿಂದ ಒಎಂಸಿ ಮಾಲೀಕರಾದ ಸಚಿವ ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಮತ್ತು ಶ್ರೀರಾಮುಲು ನಿಟ್ಟುಸಿರು ಬಿಡುವಂತಾಗಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿಲ್ ಆರ್ ದವೆ ಮತ್ತು ನ್ಯಾಯಮೂರ್ತಿ ಸಿ ವಿ ನಾಗಾರ್ಜುನ ರೆಡ್ಡಿ ಒಳಗೊಂಡ ವಿಭಾಗೀಯ ಪೀಠ, ಸರಕಾರದ ಆದೇಶದಲ್ಲಿ ಲೋಪವಿರುವುದು ಮೆಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಅಲ್ಲದೇ ತರಾತುರಿಯಲ್ಲಿ ಈ ಆದೇಶ ಹೊರಬಿದ್ದಿದೆ ಎಂದು ಅಭಿಪ್ರಾಯಪಟ್ಟಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Saturday, December 12, 2009, 10:34 [IST]