ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖ್ಯಾತ ಫೋಟೋ ಜರ್ನಲಿಸ್ಟ್ ಸತ್ಯನ್ ಇನ್ನಿಲ್ಲ

By Staff
|
Google Oneindia Kannada News

TS Satyan (Photo by Saggere Ramaswamy)
ಮೈಸೂರು, ಡಿ. 14 : ಪತ್ರಿಕಾರಂಗದಲ್ಲಿ ಆರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತ ತಂಬರಹಳ್ಳಿ ಸುಬ್ರಹ್ಮಣ್ಯ ಸತ್ಯನಾರಾಯಣ ಅಯ್ಯರ್ (85) ಭಾನುವಾರ ಮಿದುಳು ರಕ್ತಸ್ರಾವದಿಂದ ನಿಧನರಾದರು. ಅವರು ಪತ್ರಿಕಾರಂಗದಲ್ಲಿ ಟಿ ಎಸ್ ಸತ್ಯನ್ ಎಂದೇ ಖ್ಯಾತರಾಗಿದ್ದರು.

ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಡೆದ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಶನಿವಾರ ನಗರಕ್ಕೆ ಆಗಮಿಸಿದ್ದ ಅವರು ಶನಿವಾರ ಸಂಜೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಮಧ್ಯಾಹ್ನ ಇಲ್ಲಿನ ಬಿಎಂ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇರುವ ಹರಿಶ್ಚಂದ್ರ ಘಾಟ್ ನಲ್ಲಿ ಭಾನುವಾರ ಸಂಜೆಯೇ ಅವರ ಅಂತ್ಯಕ್ರಿಯೆ ನೆರವೇರಿತು. ಪತ್ನಿ, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಸತ್ಯನ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಪ್ರಮುಖ ಘಟನೆಗಳನ್ನು ತಮ್ಮ ಛಾಯಾಚಿತ್ರಗಳ ಮೂಲಕ ವಿಶ್ವಕ್ಕೆ ಪರಿಚಯಿಸಿದ ಸತ್ಯನ್ ಅವರು ಅಪ್ರತಿಮ ಪ್ರತಿಭಾವಂತರಾಗಿದ್ದರು ಎಂದು ಪ್ರಶಂಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X