ರೆಡ್ಡಿಗಳು 'ಕೈ' ತಟ್ಟಿದ್ರು, ದೇಶಪಾಂಡೆ ಪಟಾಕಿ

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಕ್ಕಟ್ಟು ಉಂಟಾಗಿ ಶಾಸಕರುಗಳು ರೆಸಾರ್ಟ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾಯಿಸುವ ನಿಟ್ಟಿನಲ್ಲಿ ರೆಡ್ಡಿ ಸಹೋದರರು ಕಾಂಗ್ರೆಸ್ ಬಾಗಿಲು ತಟ್ಟಿ ಬೆಂಬಲಕ್ಕೆ ಯತ್ನ ನಡೆಸಿದರು. ಆದರೆ, ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೊಪ್ಪು ಹಾಕಲಿಲ್ಲ ಎಂದರು.
ರೆಡ್ಡಿ ಸಹೋದರರು ಎಲ್ಲಿ ಯಾರನ್ನು ಸಂಪರ್ಕಿಸಿದರು ಎಂದು ಹೇಳಲು ನಿರಾಕರಿಸಿದ ಅವರು, ಒಟ್ಟಿನಲ್ಲಿ ಕಾಂಗ್ರೆಸ್ ಕದ ತಟ್ಟಿದ್ದಂತೂ ಸ್ಪಷ್ಟ. ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ 122 ಶಾಸಕರ ಬೆಂಬಲವಿದ್ದರೂ ಅಸ್ಥಿರ ಸರಕಾರವಾಗಿದೆ. ಯಾವ ಸಂದರ್ಭದಲ್ಲಿ ಸರಕಾರ ಪತನವಾಗಬಹುದು. ರೆಡ್ಡಿಗಳಿಂದ ಈ ಸರಕಾರಕ್ಕೆ ಆತಂಕವಂತೂ ಖಂಡಿತಾ ಇದೆ. ಇದರ ಆಯುಷ್ಯ ಬಲು ಕಮ್ಮಿ ಎಂದು ದೇಶಪಾಂಡೆ ಭವಿಷ್ಯ ನುಡಿದರು.
ಅತ್ತ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ದೇಶಪಾಂಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅನ್ಯ ಪಕ್ಷಗಳ ಬಾಗಿಲು ತಟ್ಟುವ ಸಂಸ್ಕೃತಿ ಅವರದೇ ಹೊರತು ನಮ್ಮದಲ್ಲ. ದೇಶಪಾಂಡೆ ಅವರಿಗೇನಾದರೂ ನಾಚಿಕೆ ಇದೆಯಾ? ಜನತಾಪಕ್ಷ, ಲೋಕಶಕ್ತಿ, ಸಂಯುಕ್ತ ಜನತಾದಳ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹೀಗಾಗಿ ನಾನು ಕೂಡಾ ಕಾಂಗ್ರೆಸ್ ಕದ ತಟ್ಟಿರುವ ಕನಸು ಬಿದ್ದಿರಬಹುದು ಎಂದು ವ್ಯಂಗ್ಯವಾಡಿದರು. ನಮ್ಮ ರಾಜಕೀಯ ಜೀವನ ಅಂತ್ಯವಾಗುವುದಾದರೆ ಅದು ಬಿಜೆಪಿಯಲ್ಲೇ ಮಾತ್ರ ಎಂದು ಜನಾರ್ದನರೆಡ್ಡಿ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications