ಅಂತೂ ಬಂತು ಶಿವಮೊಗ್ಗಕ್ಕೆ ಇಂಟರ್ಸಿಟಿ ರೈಲು

ಆದರೆ ಸಂಸದರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಜನರ ಬಹು ನಿರೀಕ್ಷಿತ ಇಂಟರ್ಸಿಟಿ ರೈಲನ್ನು ಆರಂಭಿಸಲು ಕೇಂದ್ರ ರೈಲ್ವೆ ಸಚಿವರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹತ್ತಾರು ಬಾರಿ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿಯವರನ್ನು, ನಮ್ಮ ರಾಜ್ಯದವರೆ ಆದ ಕೇಂದ್ರ ರೈಲ್ವೆ ರಾಜ್ಯ ಸಚಿವ ಕೆ.ಹೆಚ್. ಮುನಿಯಪ್ಪ ಅವರನ್ನು ಭೇಟಿಮಾಡಿ ಮಲೆನಾಡಿನ ಜನರ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಒಪ್ಪಿಗೆ ಪಡೆಯುವಲ್ಲಿ ಸಫಲರಾಗಿದ್ದಾರೆ.
ಇಂಟರ್ಸಿಟಿ ರೈಲು ಆರಂಭದಿಂದಾಗಿ ಜಿಲ್ಲೆಯ ಜನರು ಅತ್ಯಂತ ಕಡಿಮೆ ಸಮಯ ಹಾಗೂ ಕಡಿಮೆ ಖರ್ಚಿನಲ್ಲಿ ಬೆಂಗಳೂರಿಗೆ ಹೋಗಿ ಕೆಲಸಕಾರ್ಯ ಮುಗಿಸಿಕೊಂಡು ಅಂದೇ ವಾಪಸ್ ಬರಬಹುದಾಗಿದೆ. ಪ್ರತಿದಿನ ಬೆಳಿಗ್ಗೆ 6.20ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಡುವ ಇಂಟರ್ಸಿಟಿ ರೈಲು 11.20ಕ್ಕೆ ಬೆಂಗಳೂರು ತಲುಪಲಿದೆ. ಅದೇರೀತಿ ಸಂಜೆ 4.30ಕ್ಕೆ ಬೆಂಗಳೂರು ರೈಲ್ವೆ ನಿಲ್ದಾಣ ಬಿಟ್ಟು ರಾತ್ರಿ 9.55ಕ್ಕೆ ಶಿವಮೊಗ್ಗ ತಲುಪಲಿದೆ. ಇದರಿಂದಾಗಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ತಾಲ್ಲೂಕು ಕೇಂದ್ರಗಳ ಜನರು ರೈಲಿನ ಸೌಲಭ್ಯವನ್ನು ಬಳಸಿಕೊಳ್ಳಲು ತುಂಬ ಸಹಕಾರಿಯಾಗಲಿದೆ.
ಇಂಟರ್ಸಿಟಿ ರೈಲಿನ ಟಿಕೇಟ್ ದರ ಹವಾನಿಯಂತ್ರಿತ 300 ರೂ., ದ್ವಿತೀಯ ದರ್ಜೆ ಆಸನ 69 ರೂ. ಹಾಗೂ ಕಾದಿರಿಸುವ ದ್ವಿತೀಯದರ್ಜೆ ಟಿಕೇಟಿಗೆ ಹೆಚ್ಚುವರಿ 15ರೂ ನಿಗದಿಯಾಗಿದೆ. ಈ ರೈಲಿನಲ್ಲಿ 21 ಬೋಗಿಗಳಿದ್ದು, ಒಂದು ಎ.ಸಿ. ಛೇರ್ಕಾರ್, ಒಂದು ಕ್ವಾಟರಿಂಗ್, ಎರಡು ಲೇಡಿಸ್ ಕಂಪಾರ್ಟ್ಮೆಂಟ್, 5 ದ್ವಿತೀಯ ದರ್ಜೆ ಕಾದಿರಿಸುವ ಬೋಗಿಗಳು, 12 ದ್ವಿತೀಯದರ್ಜೆ ಬೋಗಿಗಳಿರುತ್ತವೆ. ಇದರಿಂದಾಗಿ ಶ್ರೀಮಂತರು, ಶ್ರೀಸಾಮಾನ್ಯರು ಈ ರೈಲಿನ ಸೌಲಭ್ಯವನ್ನು ಬಳಸಿಕೊಳ್ಳಲು ಎಲ್ಲ ರೀತಿಯಲ್ಲೂ ಅನುಕೂಲಕರವಾಗಿದೆ.
ಬಸ್ಸುಗಳಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುವುದೆಂದರೆ ತುಂಬ ತ್ರಾಸದಾಯಕ. ಕನಿಷ್ಠ 7 ಗಂಟೆ ಪ್ರಯಾಣ ಜೊತೆಗೆ ದುಬಾರಿ. ಸಾಮಾನ್ಯ ಬಸ್ಸಿನಲ್ಲಿ 179 ರೂ., ಶೀಥಲ್ ಬಸ್ಸ್ನಲ್ಲಿ 200 ರೂ, ರಾಜಹಂಸ 270 ರೂ., ಐರಾವತ 385 ರೂ. ತೆರಬೇಕಾಗಿದೆ. ಈ ದುಬಾರಿ ವೆಚ್ಚವನ್ನು ಇಂಟರ್ಸಿಟಿ ರೈಲು ನಿವಾರಿಸಿ ಜನರಲ್ಲಿ ಉಲ್ಲಾಸ ಮತ್ತು ಹರ್ಷವನ್ನು ತಂದಿದೆ. ಇದಲ್ಲದೆ, ಇಂಟರ್ಸಿಟಿ ರೈಲು ಆರಂಭದ ನಂತರವೂ ಬೆಳಿಗ್ಗೆ 5 ಗಂಟೆಗೆ ಹೊರಡುತ್ತಿದ್ದ ಪ್ಯಾಸೆಂಜರ್ ರೈಲು ಸಂಚಾರ ಮುಂದುವರೆದಿರುವುದು ಬಡವರ್ಗದ ಜನರಿಗೆ ಮತ್ತಷ್ಟು ಖುಷಿ ತಂದಿದೆ.
ಡಿಸೆಂಬರ್ 9ರಂದು ಬೆಳಿಗ್ಗೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರೈಲ್ವೆ ರಾಜ್ಯ ಸಚಿವ ಕೆ.ಹೆಚ್. ಮುನಿಯಪ್ಪ, ಇಂಧನ ಸಚಿವ ಕೆ. ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಡಿ.ಹೆಚ್. ಶಂಕರಮೂರ್ತಿ ಸೇರಿದಂತೆ ಹಲವಾರು ಗಣ್ಯರು ಇಂಟರ್ಸಿಟಿ ರೈಲು ಚಾಲನೆಗೆ ಹಸಿರು ನಿಶಾನೆ ತೋರಿದರು. ಬೆಳಗಿನ ಚಳಿಯನ್ನು ಲೆಕ್ಕಿಸದೆ ನಗರದ ಸಾವಿರಾರು ನಾಗರೀಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂತೋಷ ವ್ಯಕ್ತಪಡಿಸಿದರು.
ರೈಲ್ವೆ ಇಲಾಖೆಯಿಂದ ಪಡೆಯಬೇಕಿದ್ದ ಮಂಜೂರಾತಿ, ಶಿವಮೊಗ್ಗ ಹರಿಹರ ಹೊಸ ರೈಲು ಮಾರ್ಗ ನಿರ್ಮಾಣದ ಬೇಡಿಕೆ, ಹೊಳೆಹೊನ್ನೂರು ಮಾರ್ಗದಲ್ಲಿರುವ ರೈಲ್ವೆ ಗೇಟ್ ಸ್ಥಳಾಂತರ, ರಿಂಗ್ರೋಡ್ ನಿರ್ಮಾಣಕ್ಕೆ ರೈಲ್ವೆ ಇಲಾಖೆಗೆ ಸೇರಿದ ಸ್ಥಳ ಬಿಟ್ಟು ಕೊಡುವ ಸಮ್ಮತಿ, ಶಿವಮೊಗ್ಗ ತಾಳಗುಪ್ಪ ಗೇಜ್ ಪರಿವರ್ತನೆಯನ್ನು ತುರ್ತಾಗಿ ಪೂರ್ಣಗೊಳಿಸುವುದು, ಇನ್ನು ಮುಂತಾದ ಬೇಡಿಕೆಗಳಿಗೆ ಕೇಂದ್ರ ಅಸ್ತು ಎಂದಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications