ಕನ್ನಡ ಅಭ್ಯರ್ಥಿಗೆ ಮನ್ನಣೆ ನೀಡಿ : ಮುಮ ಚಂದ್ರು

Mukhyamantri Chandru
ಬೆಂಗಳೂರು, ಡಿ.16: ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಸ್ವರ್ಧಿಸುವವರ ಪಟ್ಟಿಯನ್ನು ಅಂತಿಮಗೊಳಿಸುವ ಮೊದಲು ಅಭ್ಯರ್ಥಿಗಳಿಗೆ ಕನ್ನಡ ಮನಸ್ಸಿದೆಯೇ ಎಂಬುದನ್ನು ಪರಾಮರ್ಶಿಸಬೇಕೆಂದು ಮುಖ್ಯಮಂತ್ರಿಗಳಿಗೆ, ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಪತ್ರವನ್ನು ಬರೆದಿರುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.

ವಿಧಾನ ಸೌಧದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದರೂ ರಾಜ್ಯಕ್ಕೆ ಬಂದು ನೆಲಗೊಂಡವರು ಆಂಗ್ಲ ಭಾಷೆಯನ್ನು ವಿಜೃಂಭಿಸುವಂತೆ ಮಾಡಿ ನಾಡು ನುಡಿಗೆ ಹಿನ್ನಡೆಯಾಗುವಂತೆ ಮಾಡುವುದನ್ನು ಸಹಿಸುವುದು ಸಾಧ್ಯವಿಲ್ಲವೆಂದು, ಕನ್ನಡ ವಾತಾವರಣ ನಿರ್ಮಾಣವಾಗುವುದಕ್ಕೆ ಕರ್ನಾಟಕದ ಒಟ್ಟಾರೆ ಹಿತದೃಷ್ಟಿಯಿಂದ ಈ ಮನವಿಯನ್ನು ಜನರಿಗೂ ತಿಳಿಸಲಾಗುವುದೆಂದರು.

ಹುಬ್ಬಳ್ಳಿಯಲ್ಲಿ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ

ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಹುಬ್ಬಳ್ಳಿಯ ಸವಾಯಿಗಂಧರ್ವ ಸಭಾಂಗಣದಲ್ಲಿ ಡಿ.19ರಂದು ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಅವರು ನೆರವೇರಿಸಲಿದ್ದು, ವಿಧಾನ ಪರಿಷತ್‌ನ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಚಂದ್ರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+