ರಾಮನಗರದಲ್ಲಿ ವಿಕೃತಕಾಮಿ ತಿಪ್ಪೇಶಿ ಬಂಧನ

ಸುಟ್ಟುಕರಕಲಾಗಿದ್ದ ಮಹಿಳೆಯ ಶವದ ಕೈಭಾಗದ ಮೇಲಿದ್ದ ಒಂದೇ ಒಂದು ಹಚ್ಚೆಗುರುತು ಪ್ರಕರಣವನ್ನ ಪತ್ತೆಹಚ್ಚುವಲ್ಲಿ ಸಹಕಾರಿಯಾಗಿದೆ. ಹಣಕ್ಕಾಗಿ ವಿಕೃತ ಮನಸ್ಸಿನ ಚಿತ್ರದುರ್ಗದ ತಿಪ್ಪೇಶಿ ಕಾಮತೃಷೆ ತೀರಿಸಿಕೊಂಡು ನರ್ಸಿಂಗ್ ತರಬೇತಿ ಮುಗಿಸಿದ್ದ ಗೆಳತಿ ಹರಿಣಿಯ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ತಿಪ್ಪೇಶಿ ಮತ್ತು ಗೆಳತಿ ಇಬ್ಬರೂ ವಿವಾಹಿತರಾಗಿದ್ದರೂ ಇಬ್ಬರ ನಡುವೆ ಇದ್ದ ಅನೈತಿಕ ಸಂಬಂಧವೇ ಕೊಲೆಗೆ ಕಾರಣವೆಂದು ತಿಳಿದುಬಂದಿದೆ. ಕೊಲೆಗಾರ ತಿಪ್ಪೇಶಿಗೆ ಹೆಂಡತಿಯಿದ್ದರೂ ಬೇರೆ ಮಹಿಳೆಯರೊಂದಿಗೆ ಸಲುಗೆ ಬೆಳೆಸಿಕೊಂಡು ದೈಹಿಕವಾಗಿ ಬಳಸಿಕೊಳ್ಳುತ್ತಿದ್ದ ಎಂಬುದು ತನಿಖೆಯ ಸಂದರ್ಭದಲ್ಲಿ ತಿಳಿದುಬಂದಿದೆ.
ಕೊಲೆಯಾಗಿರುವ ಹರಿಣಿ ತನ್ನ ಮಾವನೊಂದಿಗೆ ಕಳೆದ ನಾಲ್ಕುವರ್ಷದ ಹಿಂದೆ ವಿವಾಹವಾಗಿ ನರ್ಸಿಂಗ್ ಕೋರ್ಸ್ ಮಾಡಲು ಗೆಳತಿಯರೊಂದಿಗೆ ಬೆಂಗಳೂರಿನ ಕಾಲೇಜು ಸೇರಿದ್ದಳು. ನರ್ಸಿಂಗ್ ಕೊರ್ಸ್ ಮುಗಿಸಿ ಸುಂಕದಕಟ್ಟೆ ಕುಸುಮ ಕ್ಲಿನಿಕ್ನಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸ್ತ್ರೀಲೋಲ ತಿಪ್ಪೇಶಿಯೊಂದಿಗೆ ಸ್ನೇಹ ಸಂಪರ್ಕ ಬೆಳೆಸಿಕೊಂಡು ತೀರಾ ಹತ್ತಿರವಾಗಿದ್ದಾಳೆ.
ಕೊಲೆಯಾದ ಹರಿಣಿಯ ರೂಂನಲ್ಲಿದ್ದ ತಿಪ್ಪೇಶಿಯ ಸಂಬಂಧಿ ಶಿಲ್ಪಾಳ ಮೂಲಕ ಇವರಿಬ್ಬರ ಸ್ನೇಹ ಗಾಢವಾಗಿ ಬೆಳೆಯಲು ಸಾಧ್ಯವಾಗಿದೆ. ಇಬ್ಬರೂ ವಾರಾಂತ್ಯಗಳಲ್ಲಿ ಸುತ್ತಾಡುವುದನ್ನ ಅಭ್ಯಾಸಮಾಡಿಕೊಂಡಿದ್ದರು. ನಂತರ ತಿಪ್ಪೇಶಿಗೆ ಹಣದ ಅವಶ್ಯಕತೆ ಇದ್ದುದರಿಂದ ರಾಮನಗರ ಬಳಿಯ ಮಾಯಗಾನಹಳ್ಳಿ ಬಳಿ ಹರಿಣಿಯನ್ನ ಕರೆದೊಯ್ದು ವೇಲ್ನಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಗುರುತು ಸಿಗದ ರೀತಿಯಲ್ಲಿ ಪೆಟ್ರೋಲ್ ಸುರಿದು ಆಕೆಯ ದೇಹಕ್ಕೆ ಬೆಂಕಿಯಿಟ್ಟೆ ಎಂದು ಯಾವುದೇ ಅಳುಕಿಲ್ಲದೇ ತಿಪ್ಪೇಶಿ ಹೇಳುತ್ತಾನೆ.
ಬಟ್ಟೆ ಬದಲಿಸುವ ಹಾಗೆ ಗೆಳತಿಯರನ್ನ ಬದಲಿಸುವ ಈ ತಿಪ್ಪೇಶಿ ಇಬ್ಬರು ಮಹಿಳೆಯರೊಂದಿಗೆ ಇರುವಾಗ ಪೋಲೀಸರು ಬಂಧಿಸಿದ್ದಾರೆ. ತನ್ನ ಕೊಠಡಿಯಲ್ಲಿ ತನ್ನ ಹೆಂಡತಿಯ ಫೋಟೋವನ್ನಿಡದ ಈ ಭೂಪ ತನ್ನ ಗೆಳತಿಯರ ಫೋಟೋಗಳನ್ನು ಇಟ್ಟುಕೊಂಡಿದ್ದನೆಂದು ತಿಳಿದುಬಂದಿದೆ. ತನ್ನ ಕಾಮತೃಷೆಗಾಗಿ ಗೆಳತಿಯನ್ನು ಕೊಂದ ಈ ತಿಪ್ಪೇಶಿಯ ಬಂಧನ ವಿಷಯ ತಿಳಿಯುತ್ತಿದ್ದಂತೆ ಸಪ್ತಪದಿ ತುಳಿದ ಪತ್ನಿ ಈತನ ಕೀಚಕ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾಳೆ.
ಅಪರಿಚಿತ ಶವವೆಂದು ಪರಿಗಣಿಸಿದ್ದ ರಾಮನಗರ ಪೋಲೀಸರಿಗೆ ಹರಿಣಿಯ ಕೈಮೇಲಿದ್ದ ಎಸ್.ವೈ. ಹಚ್ಚೆಗುರುತು ಪ್ರಕರಣವನ್ನ ಪತ್ತೆಹಚ್ಚಲು ಸಹಕಾರಿಯಾಯಿತು. ಸುಂಕದಕಟ್ಟೆ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕೇಸ್ಗೂ ಈ ಪ್ರಕರಣಕ್ಕೂ ಸಾಮ್ಯತೆ ಇದ್ದುದರಿಂದ ಮುಚ್ಚಿಹೋಗಬೇಕಾಗಿದ್ದ ಪ್ರಕರಣ ಬಯಲಿಗೆ ಬಂದಂತಾಗಿದೆ. ರಾಮನಗರ ಗ್ರಾಮಾಂತರ ವೃತ್ತ ನಿರೀಕ್ಷಕ ಧರ್ಮೇಂದ್ರ, ಪಿ.ಎಸ್.ಐ ವಿನೋದ್ ಭಟ್ ನೇತೃತ್ವದಲ್ಲಿ ತನಿಖೆ ನಡೆಸಿ ಕಡಿಮೆ ಅವಧಿಯಲ್ಲೇ ಪ್ರಕರಣವನ್ನ ಬಯಲಿಗೆಳೆದಿದ್ದಾರೆ. ಪೋಲೀಸ್ ಸಿಬ್ಬಂದಿಗಳಾದ ಅನಂತಯ್ಯ, ನರಸಿಂಹಮೂರ್ತಿ, ಪ್ರಕಾಶ್ ಮತ್ತು ಪುರಂದರ್ ಕೊಲೆಗಡುಕನನ್ನ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications