ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ?

ನ್ಯಾಯಮೂರ್ತಿ ವಿ ಗೋಪಾಲಗೌಡ ಹಾಗೂ ಬಿ ವಿ ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಮೀಸಲು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಸರಕಾರದ ವಾರ್ಡ್ ಮೀಸಲನ್ನು ಪರಿಷ್ಕರಿಸಲು ಕಾಲಾವಕಾಶ ನೀಡಿದ್ದರು. 2001 ರ ಜನಗಣತಿ ಪ್ರಕಾರ ಮೀಸಲಾತಿ ಪಟ್ಟಿ ತಯಾರಿಸುವಂತೆ ಸೂಚಿಸಿದ್ದರು. ಬಿಬಿಎಂಪಿ ಗೆ ಜನಪ್ರತಿನಿಧಿಗಳ ಆಡಳಿತ ಬರಬೇಕು ಎನ್ನುವುದು ಜನರ ಆಶಯವಾಗಿದೆ. ಇದರ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಾಪಾಡಬೇಕಾದುದು ಸರಕಾರದ ಜವಾಬ್ದಾರಿ. ಈಗಾಗಲೇ ಪ್ರಕಟಿಸಿರುವ ಮೀಸಲಿನಲ್ಲಿ ನಿಯಾಮಾವಳಿಗಳನ್ನು ಪಾಲಿಸಿಲ್ಲ ಎಂದು ಪೀಠ ಆಕ್ಷೇಪಿಸಿತ್ತು.
ವಿಧಾನಸಭಾ ಕ್ಷೇತ್ರವಾರು ಮೀಸಲು ನಿಗದಿ ಮಾಡಿದ್ದು, ಕೆಲ ಗೊಂದಲಗಳಿವೆ ಎಂದು ಅರ್ಜಿದಾರರು ದೂರಿದ್ದರು. ಅರ್ಜಿದಾರರ ಪರ ರವಿವರ್ಮಕುಮಾರ್ ಅವರ ವಾದ-ವಿವಾದವನ್ನು ಆಲಿಸಿದ ಪೀಠ ಸಂವಿಧಾನದ ವಿಧಿ 243ಟಿ ಅನ್ವಯ ಮೀಸಲನ್ನು ನಿಗದಿ ಮಾಡುವಂತೆ ಸೂಚಿಸಿತ್ತು. ವಾರ್ಡ್ ಗಳ ಮರುವಿಗಂಡಣೆಗೆ ನಿಯಮಾವಳಿ ರೂಪಿಸಿ ನಂತರ ಮೀಸಲಾತಿ ಪಟ್ಟಿಯ ಗೊಂದಲ ನಿವಾರಿಸುವ ಹೊಣೆ ಬಿಜೆಪಿ ಸರ್ಕಾರ ಮೇಲಿತ್ತು.
ಆದರೆ,ನಿಯಮವಳಿ ರೂಪಿಸುವಲ್ಲಿ ವಿಫಲವಾದ ಸರ್ಕಾರ, ಜುಲೈ 21ರಂದು ನೀಡಿದ್ದ ಮೀಸಲಾತಿ ಪಟ್ಟಿ ಸಾಂವಿಧಾನಿಕ ವಿರೋಧಿ ಎಂದು ಆರೋಪ ಹೊರೆಸಲಾಗಿತ್ತು. ಇದರ ಆಧಾರ ಮೇಲೆ ಹೈ ಕೋರ್ಟ್ ವಾರ್ಡ್ ಮೀಸಲಾತಿಯನ್ನು ಬದಿಗೊತ್ತಿ ಫೆ.21 ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.
ಈ ಆದೇಶದ ವಿರುದ್ಧ ಆರ್ ವಸುಧಾ ಅವರು ಸುಪ್ರೀಂಕೋರ್ಟ್ ನಲ್ಲಿ ರಿಟ್ ಆರ್ಜಿ ಸಲ್ಲಿಸಿದ್ದರು. 1976 ರ ಕರ್ನಾಟಕ ಮುನ್ಸಿಪಾಲ್ ಕಾರ್ಪೊರೇಷನ್ ಕಾಯಿದೆ ಅನ್ವಯ ಮುನ್ಸಿಪಾಲ್ ಪ್ರದೇಶದ ಒಟ್ಟಾರೆ ಜನಸಂಖ್ಯೆ ಯ ಆಧಾರದ ಮೇಲೆ ಮೀಸಲಾತಿ ಪಟ್ಟಿಯನ್ನು ನೀಡಬೇಕು. ರಾಜ್ಯ ಸರ್ಕಾರ ಸಲ್ಲಿಸಿರುವ ಪಟ್ಟಿಯಿಂದ ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಅನ್ಯಾಯವಾಗಲಿದೆ ಎಂದು ಅರ್ಜಿದಾರರ ಪರ ಸೊಲಿ ಸೊರಾಬ್ಜಿ ಅವರು ವಾದಿಸಿದ್ದರು. ವಾದವನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ವಾರ್ಡ್ ಮೀಸಲಾತಿ ಗೊಂದಲ ನಿವಾರಣೆ ಆಗುವವರೆಗೂ ಬಿಬಿಎಂಪಿ ಚುನಾವಣೆ ನಡೆಯಕೂಡದು ಎಂದು ಆದೇಶ ನೀಡಿದೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications