ಕಗ್ಗಂಟಾದ ಬಿಕ್ಕಟ್ಟು, ಭಿನ್ನರಲ್ಲಿ ಒಬ್ಬರಿಗೆ ಸ್ಥಾನ

ಸಿಎಂ ನಿವಾಸದ ಸಭೆಯಿಂದ ಹೊರಬಂದ ರೇಣುಕಾಚಾರ್ಯ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವೂ ಸರಿಯಾಗಿದೆ ಎಂದಷ್ಟೆ ಹೇಳಿದರು. ಮಂತ್ರಿ ಸ್ಥಾನ ಸಿಗುವುದು ದೇವರ ಇಚ್ಚೆ ಎಂದರು. ಭಿನ್ನರ ಗುಂಪು 4 ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂಬ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಭಿನ್ನರ ಪಾಳೆಯದಲ್ಲಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲು ರೆಡಿಯಾಗಿದ್ದಾರೆ. ಯಾರು ಸಚಿವರಾಗಬೇಕು ಎಂಬುದನ್ನು ಭಿನ್ನರ ಕಡೆಗೆ ಬಿಟ್ಟಿರುವುದು ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರಕ್ಕೆ 124 ಶಾಸಕರ ಬೆಂಬಲವಿದೆ. ಆದರೆ, ಸಚಿವ ಸ್ಥಾನದ ಅಕಾಂಕ್ಷಿಗಳಾಗಿರುವ ಶಾಸಕ ರೇಣುಕಾಚಾರ್ಯ, ಎಸ್ ಕೆ ಬೆಳ್ಳುಬ್ಬಿ, ಗೋಪಾಲಕೃಷ್ಣ ಬೇಳೂರು ಸೇರಿದಂತೆ ಸುಮಾರು 15 ಮಂದಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ರೆಡ್ಡಿಗಳು ಯಡಿಯೂರಪ್ಪ ಅವರ ವಿರುದ್ಧ ಬಂಡೆದ್ದಾಗ ಅವರ ಬೆನ್ನಿಗೆ ನಿಂತವರು ಇದೇ ರೇಣುಕಾಚಾರ್ಯ ಮತ್ತವರ ಪಡೆ. ಆದರೆ, ರೆಡ್ಡಿಗಳು ತಮ್ಮ ಬೇಡಿಕೆಯನ್ನು ಈಡೇರಿಸಿಕೊಂಡು ಇವರನ್ನು ಕೈಬಿಟ್ಟಿರುವ ಅಸಮಾಧಾನ ಒಂದಡೆಯಾದರೆ, ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯ ಸಂಪುಟ ಪುನರ್ ರಚನೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಸಂದೇಶ ರವಾನೆ ಮಾಡಿರುವುದು ಬಂಡಾಯದ ಬಾವುಟ ಹಾರಿಸಲು ಕಾರಣವಾಗಿದೆ.
ಮೂಲ ಬಿಜೆಪಿಯವರಾದ ನಮ್ಮನ್ನು ಕಡೆಗಣಿಸಿ ಇತ್ತೀಚೆಗೆ ಬಿಜೆಪಿ ಸೇರಿಕೊಂಡವರಿಗೆ ಸಚಿವ ಸ್ಥಾನ ನೀಡಿರುವ ರೇಣುಕಾಚಾರ್ಯ ಹಾಗೂ ಮತ್ತವರ ಬೆಂಬಲಿಗರ ಆಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ರೆಸಾರ್ಟ್ ನಲ್ಲಿ ಸಭೆ ಆರಂಭಿಸಿದ ರೇಣುಕಾಚಾರ್ಯ ಬಿಜೆಪಿ 20 ಮಂದಿ ಅತೃಪ್ತ ಶಾಸಕರೊಂದಿಗೆ ಸಂಪರ್ಕ ಸಾಧಿಸಿ ಕಾಂಗ್ರೆಸ್-ಜೆಡಿಎಸ್ ಸರಕಾರ ರಚಿಸುವ ಯತ್ನದ ಸುಳಿವು ಹೊರಬಿದ್ದಿತ್ತು. ಆಗ ತಕ್ಷಣ ಕಾರ್ಯಾಚರಣೆ ಆರಂಭಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ.
ನೂತನ ಸರಕಾರ ರಚನೆಯ ಕನಸು ಕಂಡ ಮಾಜಿ ಸಿಎಂ ನವದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಅಜಾದ್ ಅವರೊಂದಿಗೆ ಚೌಕಾಶಿ ಶುರು ಮಾಡಿಕೊಂಡರು. ಕಾಂಗ್ರೆಸ್-ಜೆಡಿಎಸ್ ಸರಕಾರಕ್ಕೆ ಸಿದ್ದರಾಮಯ್ಯ ಅಡ್ಡಗಾಲು ಆಗುವ ಸಾಧ್ಯತೆಯನ್ನು ಗಮನಿಸಿದ ದೇವೇಗೌಡರು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದರೆ ನಮ್ಮದೇನು ಅಭ್ಯಂತರವಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದರು. ಆದರೆ, ಸೋನಿಯಾ ಗಾಂಧಿ ಮಾತ್ರ ಕ್ಯಾರೆ ಅನ್ನಲಿಲ್ಲ, ಸಿದ್ದು ಕೂಡಾ ಸರಕಾರ ಬೀಳಿಸಲ್ಲ, ಆದಾಗಲೇ ಬಿದ್ದರೆ ನಾವು ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಬೆಳಗ್ಗೆಯಿಂದಲೇ ಭಿನ್ನರು ಸಚಿವ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ರೇಣುಕಾಚಾರ್ಯ, ನಾವು ಬಂಡಾಯ ಎದ್ದಿಲ್ಲ. ನಾವು ಕೂಡಾ ಬಿಜೆಪಿ ಶಾಸಕರು ಎಂದು ನುಣುಚಿಕೊಂಡರು. ಬಿಜೆಪಿ ಉಪಾಧ್ಯಕ್ಷ ಸಂಸದ ಸಿದ್ಧೇಶ್ ಕೂಡಾ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುವುದು ನಿಜ. ಅದನ್ನು ಇಂದು ಸಂಜೆ ವೇಳೆಗೆ ಬಗೆಹರಿಯಲಿದೆ ಎಂದು ಹೇಳಿದರು. ಭಿನ್ನರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದು ಮಾತುಕತೆ ನಡೆಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ನಡೆದ ಎರಡನೇ ಹೈಡ್ರಾಮ ರಾತ್ರಿಗೆ ಸುಖಾಂತ್ಯ ಕಾಣಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications