ಕಗ್ಗಂಟಾದ ಬಿಕ್ಕಟ್ಟು, ಭಿನ್ನರಲ್ಲಿ ಒಬ್ಬರಿಗೆ ಸ್ಥಾನ

ಸಿಎಂ ನಿವಾಸದ ಸಭೆಯಿಂದ ಹೊರಬಂದ ರೇಣುಕಾಚಾರ್ಯ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವೂ ಸರಿಯಾಗಿದೆ ಎಂದಷ್ಟೆ ಹೇಳಿದರು. ಮಂತ್ರಿ ಸ್ಥಾನ ಸಿಗುವುದು ದೇವರ ಇಚ್ಚೆ ಎಂದರು. ಭಿನ್ನರ ಗುಂಪು 4 ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂಬ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಭಿನ್ನರ ಪಾಳೆಯದಲ್ಲಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲು ರೆಡಿಯಾಗಿದ್ದಾರೆ. ಯಾರು ಸಚಿವರಾಗಬೇಕು ಎಂಬುದನ್ನು ಭಿನ್ನರ ಕಡೆಗೆ ಬಿಟ್ಟಿರುವುದು ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರಕ್ಕೆ 124 ಶಾಸಕರ ಬೆಂಬಲವಿದೆ. ಆದರೆ, ಸಚಿವ ಸ್ಥಾನದ ಅಕಾಂಕ್ಷಿಗಳಾಗಿರುವ ಶಾಸಕ ರೇಣುಕಾಚಾರ್ಯ, ಎಸ್ ಕೆ ಬೆಳ್ಳುಬ್ಬಿ, ಗೋಪಾಲಕೃಷ್ಣ ಬೇಳೂರು ಸೇರಿದಂತೆ ಸುಮಾರು 15 ಮಂದಿ ಶಾಸಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ರೆಡ್ಡಿಗಳು ಯಡಿಯೂರಪ್ಪ ಅವರ ವಿರುದ್ಧ ಬಂಡೆದ್ದಾಗ ಅವರ ಬೆನ್ನಿಗೆ ನಿಂತವರು ಇದೇ ರೇಣುಕಾಚಾರ್ಯ ಮತ್ತವರ ಪಡೆ. ಆದರೆ, ರೆಡ್ಡಿಗಳು ತಮ್ಮ ಬೇಡಿಕೆಯನ್ನು ಈಡೇರಿಸಿಕೊಂಡು ಇವರನ್ನು ಕೈಬಿಟ್ಟಿರುವ ಅಸಮಾಧಾನ ಒಂದಡೆಯಾದರೆ, ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯ ಸಂಪುಟ ಪುನರ್ ರಚನೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಸಂದೇಶ ರವಾನೆ ಮಾಡಿರುವುದು ಬಂಡಾಯದ ಬಾವುಟ ಹಾರಿಸಲು ಕಾರಣವಾಗಿದೆ.
ಮೂಲ ಬಿಜೆಪಿಯವರಾದ ನಮ್ಮನ್ನು ಕಡೆಗಣಿಸಿ ಇತ್ತೀಚೆಗೆ ಬಿಜೆಪಿ ಸೇರಿಕೊಂಡವರಿಗೆ ಸಚಿವ ಸ್ಥಾನ ನೀಡಿರುವ ರೇಣುಕಾಚಾರ್ಯ ಹಾಗೂ ಮತ್ತವರ ಬೆಂಬಲಿಗರ ಆಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ರೆಸಾರ್ಟ್ ನಲ್ಲಿ ಸಭೆ ಆರಂಭಿಸಿದ ರೇಣುಕಾಚಾರ್ಯ ಬಿಜೆಪಿ 20 ಮಂದಿ ಅತೃಪ್ತ ಶಾಸಕರೊಂದಿಗೆ ಸಂಪರ್ಕ ಸಾಧಿಸಿ ಕಾಂಗ್ರೆಸ್-ಜೆಡಿಎಸ್ ಸರಕಾರ ರಚಿಸುವ ಯತ್ನದ ಸುಳಿವು ಹೊರಬಿದ್ದಿತ್ತು. ಆಗ ತಕ್ಷಣ ಕಾರ್ಯಾಚರಣೆ ಆರಂಭಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ.
ನೂತನ ಸರಕಾರ ರಚನೆಯ ಕನಸು ಕಂಡ ಮಾಜಿ ಸಿಎಂ ನವದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಅಜಾದ್ ಅವರೊಂದಿಗೆ ಚೌಕಾಶಿ ಶುರು ಮಾಡಿಕೊಂಡರು. ಕಾಂಗ್ರೆಸ್-ಜೆಡಿಎಸ್ ಸರಕಾರಕ್ಕೆ ಸಿದ್ದರಾಮಯ್ಯ ಅಡ್ಡಗಾಲು ಆಗುವ ಸಾಧ್ಯತೆಯನ್ನು ಗಮನಿಸಿದ ದೇವೇಗೌಡರು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದರೆ ನಮ್ಮದೇನು ಅಭ್ಯಂತರವಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದರು. ಆದರೆ, ಸೋನಿಯಾ ಗಾಂಧಿ ಮಾತ್ರ ಕ್ಯಾರೆ ಅನ್ನಲಿಲ್ಲ, ಸಿದ್ದು ಕೂಡಾ ಸರಕಾರ ಬೀಳಿಸಲ್ಲ, ಆದಾಗಲೇ ಬಿದ್ದರೆ ನಾವು ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಬೆಳಗ್ಗೆಯಿಂದಲೇ ಭಿನ್ನರು ಸಚಿವ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ರೇಣುಕಾಚಾರ್ಯ, ನಾವು ಬಂಡಾಯ ಎದ್ದಿಲ್ಲ. ನಾವು ಕೂಡಾ ಬಿಜೆಪಿ ಶಾಸಕರು ಎಂದು ನುಣುಚಿಕೊಂಡರು. ಬಿಜೆಪಿ ಉಪಾಧ್ಯಕ್ಷ ಸಂಸದ ಸಿದ್ಧೇಶ್ ಕೂಡಾ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುವುದು ನಿಜ. ಅದನ್ನು ಇಂದು ಸಂಜೆ ವೇಳೆಗೆ ಬಗೆಹರಿಯಲಿದೆ ಎಂದು ಹೇಳಿದರು. ಭಿನ್ನರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದು ಮಾತುಕತೆ ನಡೆಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ನಡೆದ ಎರಡನೇ ಹೈಡ್ರಾಮ ರಾತ್ರಿಗೆ ಸುಖಾಂತ್ಯ ಕಾಣಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications