ಅನಂತಮೂರ್ತಿಯವರ ಕೊನೆಯಾಸೆಯಿದು...

ನಗರದ ಸೆಂಟ್ರಲ್ ಕಾಲೇಜಿನಲ್ಲಿ ಅಭಿನವ ಹಾಗೂ ಕ್ಯಾಲಿಫೋರ್ನಿಯಾದ ಸಾಹಿತ್ಯಾಂಜಲಿ ಜೊತೆಯಾಗಿ ಅನಂತಮೂರ್ತಿ 77 ರ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನಂತಮೂರ್ತಿಯವರ ಕಾಲಮಾನ ವಿಮರ್ಶಾ ಸಂಕಲನ, ನಾಗ ಐತಾಳ ಸಂಪಾದಿಸಿದ ಅನಂತಮುಖದ ಮೂರ್ತಿ ಪುಸ್ತಕ ಬಿಡುಗಡೆ ಹಾಗೂ ವೆಬ್ ಸೈಟ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಅಭಿವೃದ್ಧಿ ಎಂಬುದು ವಿಷಶಬ್ದ. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶವಾಗುತ್ತಿದೆ. ರೈತರು, ಕುಶಲಕರ್ಮಿಗಳು ತಮ್ಮದೇ ಆದ ರೀತಿಯಲ್ಲಿ ಅಭಿವೃದ್ಧಿಯಲ್ಲಿ ತೊಡಗಿದ್ದಾರೆ. ಆದರೆ, ರಾಜಕೀಯ ಪಕ್ಷಗಳು ಬಳಸುವ ಅಭಿವೃದ್ಧಿ ಶಬ್ಧದ ಬಗ್ಗೆ ವಿಮರ್ಶೆ ಆರಂಭವಾಗಬೇಕು. ಹಸಿವು, ಬಡತನ ಅಭಿವೃದ್ಧಿ ಮೂರು ಬೇರೆ ಬೇರೆ. ಅದು ಅರ್ಥ ಆಗಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಆನಂತಮೂರ್ತಿ ಪ್ರತಿಪಾದಿಸಿದರು.
ನೆಲ ಮತ್ತ ಜಲಕ್ಕೆ ವಿಷ ಹಾಕುವವರನ್ನು ಬಹಿಷ್ಕರಿಸಿ. ಕನ್ನಡ ಭಾಷೆ ಉಳಿಯಬೇಕಾದರೆ ಎಲ್ಲ ಮಕ್ಕಳೂ ಕನ್ನಡದಲ್ಲೇ ಪ್ರಾಥಮಿಕ ಶಿಕ್ಷಣ ಪೂರೈಸಬೇಕು. ಏಕ ರೀತಿ ಶಾಲೆ, ಸಮಾನ ಶಿಕ್ಷಣ ಎಲ್ಲರಿಗೂ ದೊರೆಯಬೇಕು. ಇದು ನನ್ನ ಕೊನೆಗಾಲದ ಆಸೆ ಎಂದು ಅನಂತಮೂರ್ತಿ ಹೇಳಿದರು. ರಾಜ್ಯದ ಎಲ್ಲ ವಿವಿಗಳ ಕನ್ನಡ ವಿಭಾಗಗಳತ್ತ ವಿಶೇಷವಾಗಿ ಗಮನ ಹರಿಸಬೇಕಾದಂಥ ಅನಿವಾರ್ಯ ಸ್ಥಿತಿ ಬಂದೊದಗಿದೆ. ಅದರಲ್ಲೂ ಬೆಂಗಳೂರು ವಿವಿಯ ಕನ್ನಡ ವಿಭಾಗ ಅಧೋಗತಿಗಿಳಿದಿದೆ. ಈ ವಿಷಯವಾಗಿ ನಾವಿಬ್ಬರೂ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸೋಣ ಎಂಗು ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ಅವರನ್ನು ಅನಂತಮೂರ್ತಿ ಬಹಿರಂಗವಾಗಿ ವಿನಂತಿಸಿಕೊಂಡರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications