ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಸಾಂಸ್ಕೃತಿಕ ಸಂಜೆ

Splendid view from the top of Nrupatunga Betta, Hubballi
ಹುಬ್ಬಳ್ಳಿ, ಡಿ. 22 : ಧಾರವಾಡ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನೃಪತುಂಗ ಬೆಟ್ಟದ ವಾಯು ವಿಹಾರಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 27ರಂದು ಖ್ಯಾತ ಶಹನಾಯಿ ಕಲಾವಿದರಾದ ಬಸವರಾಜ ಭಜಂತ್ರಿ ಅವರಿಂದ ಶಹನಾಯಿ ವಾದನ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಉದ್ಯಾನವನದಲ್ಲಿ ಸಾಂಸ್ಕೃತಿಕ ಸಂಜೆ ಎನ್ನುವ ಯೋಜನೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಯಲು ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಈ ಸಂಗೀತ ಕಾರ್ಯಕ್ರಮ ಜರುಗಲಿದೆ.

ಬಸವರಾಜ ಭಜಂತ್ರಿ ಅವರ ಜೊತೆ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವೈ. ಕಾಶಣ್ಣ ಅವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ವಿನೂತನ ಕಾರ್ಯಕ್ರಮದಲ್ಲಿ ಅವಳಿ ನಗರದ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾಧಿಕಾರಿಗಳಾದ ದರ್ಪಣ ಜೈನ್ ಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+