ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೇಣುಕಾಚಾರ್ಯ ಸಚಿವರಾಗಲಿದ್ದಾರೆ, ಸಿಎಂ
ಮಾಧ್ಯಮಗಳಿಗೆ ಪ್ರತಿಕ್ರಿಯ ನೀಡಿದ ಯಡಿಯೂರಪ್ಪ, ರೇಣುಕಾಚಾರ್ಯ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಗುರುವಾರ ಬೆಳಗ್ಗೆ ನಡೆಯುವ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು. ಈ ನಿರ್ಧಾರ ಹೊರಬಿದ್ದ ನಂತರ ಬೆಂಗಳೂರಿನ ಬಿಜೆಪಿ ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡದಂತೆ ಒತ್ತಡ ಹೇರಿದ್ದಾರೆ.
ಪದೆಪದೇ ಭಿನ್ನಮತೀಯ ಚಟುವಟಿಕೆ ನಡೆಸಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಪಕ್ಷದ ವರಿಷ್ಠರ ನಿರ್ಣಯಕ್ಕೆ ತಲೆಬಾಗಿ ನಡೆಯುವ ಶಾಸಕರನ್ನು ನಿರ್ಲಕ್ಷಿಸಿದಂತಾಗುತ್ತದೆ. ಈ ಎಲ್ಲ ಕಾರಣಗಳಿಂದ ಈಗ ಕೈಗೊಂಡಿರುವ ತೀರ್ಮಾನವನ್ನು ಕೈಬಿಡಬೇಕು ಎಂದು ಶಾಸಕರಾದ ಎಸ್ಆರ್ ವಿಶ್ವನಾಥ್, ಡಾ ಅಶ್ವತ್ಥನಾರಾಯಣ, ಎನ್ಎಸ್ ನಂದೀಶ್ ರೆಡ್ಡಿ ಮತ್ತಿತರರು ಯಡಿಯೂರಪ್ಪ ಅವರ ಮೇಲೆ ತೀವ್ರ ಒತ್ತಡ ಹೇರಿದ್ದಾರೆ.
Comments
bjp ಬಿಜೆಪಿ yediyurappa ಯಡಿಯೂರಪ್ಪ ಭಿನ್ನಮತ ರೇಣುಕಾಚಾರ್ಯ ಬಂಡಾಯ renukacharya ಎಂಪಿ ರೇಣುಕಾಚಾರ್ಯ rift in bjp
Story first published: Tuesday, December 22, 2009, 12:00 [IST]