ಬಿಜೆಪಿ ಅಂದ್ರೆ ಭಾರತೀಯ ಜಗಳ ಪಾರ್ಟಿ!

ಈ ಮೊದಲು ರೆಡ್ಡಿಗಳು ಅಬ್ಬರಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಿತ್ತೊಗೆಯಬೇಕು ಎಂದು ಶತಾಯಗತಾಯ ಪ್ರಯತ್ನ ನಡೆಸಿದರು. ಆದರೆ, ಹೈಕಮಾಂಡ್ ಮಧ್ಯೆ ಪ್ರವೇಶದಿಂದ ಬಿಕ್ಕಟ್ಟು ಶಮನಗೊಂಡಿತು. ಅದು ಮುಗಿದು ತಿಂಗಳು ಕಳೆದಿಲ್ಲ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತವರ ಗ್ಯಾಂಗ್ ಭಿನ್ನಮತೀಯ ಚಟುವಟಿಕೆ ಆರಂಭಿಸಿ ಸರಕಾರದ ಬುಡಕ್ಕೆ ನೀರು ಬೀಡುವ ಕೆಲಸಕ್ಕೆ ಕೈಹಾಕಿದರು. ಗುರುವಾರ ಮಂತ್ರಿ ಮಾಡುವ ಭರವಸೆಯನ್ನು ರೇಣುಕಾಚಾರ್ಯಗೆ ನೀಡಿ ನಿರಮ್ಮಳವಾಗಿದ್ದ ಯಡಿಯೂರಪ್ಪ ಅವರಿಗೆ ಮತ್ತೊಂದು ಪೀಕಲಾಟ ಶುರುವಾಗಿದೆ.
ಸದ್ಯ ಬಿಜೆಪಿ ಪಕ್ಷ ಮತ್ತು ಸರಕಾರದಲ್ಲಿ ಏನು ನಡೆಯುತ್ತದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಾಗಲಿ, ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿಗಾಗಲಿ, ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರಿಗಾಗಲಿ ತಿಳಿಯುತ್ತಿಲ್ಲ. ಎಲ್ಲರೂ ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ. ಗಣಿಧಣಿಗಳು ಮಾತ್ರ ನಮಗೆ ಸಂಬಂಧಿಸಿದ್ದಲ್ಲ ಎಂದು ತಣ್ಣಗೆ ಬಳ್ಳಾರಿಯಲ್ಲಿ ತಮ್ಮ ವ್ಯವಹಾರದಲ್ಲಿ ಮಗ್ನರಾಗಿದ್ದಾರೆ. ಆದರೆ, ನಿಜವಾಗಿ ನರಳತೊಡಗಿರುವುದು ರಾಜ್ಯದ ಆರು ಕೋಟಿ ಮತದಾರರು. ಹಿಡಿ ಶಾಪ ಹಾಕುತ್ತಿರುವವರು ಕೂಡಾ ಇದೇ ಜನತೆ.
ಯಡಿಯೂರಪ್ಪ ಭಿನ್ನಮತ ಶಮನಗೊಳಿಸಲು ರೇಣುಕಾಚಾರ್ಯಗೆ ಸಚಿವ ಸ್ಥಾನ ನೀಡಲು ಮುಂದಾಗಿದ್ದಾರೆ. ಆದರೆ, ರೇಣುಕಾಚಾರ್ಯ ಅವರನ್ನು ವಿರೋಧಿಸುವ ಗುಂಪೊಂದು ಸೃಷ್ಟಿಯಾಗಿದೆ. ಭಿನ್ನಮತೀಯ ಚಟುವಟಿಕೆ ನಡೆಸಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವ ರೇಣುಕಾಚಾರ್ಯಗೆ ಮಂತ್ರಿಗಿರಿ ನೀಡಬಾರದು. ಅದರ ಬದಲಾಗಿ ಪಕ್ಷದಲ್ಲಿರುವ ಹಿರಿಯ ಶಾಸಕರಿಗೆ ಮಂತ್ರಿಗಿರಿ ನೀಡಿ ಎಂದು ಸುಮಾರು 35 ಮಂದಿ ಶಾಸಕರು ಸಹಿ ಸಂಗ್ರಹಿಸಿ ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ ಮಂತ್ರಿಗಿರಿಯ ವಿರೋಧಿ ಗುಂಪಿನ ನಾಯಕ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಪಕ್ಷದಲ್ಲಿ ಹಿರಿಯ ಶಾಸಕರಾದ ಶಂಕರಲಿಂಗೇಗೌಡ, ರಾಮದಾಸ್, ನಾರಾಯಣಸ್ವಾಮಿ, ಎಸ್ ಕೆ ಬೆಳ್ಳುಬ್ಬಿ, ಸಿಟಿ ರವಿ ಅವರನ್ನು ಮಂತ್ರಿ ಮಾಡಲಿ. ರೇಣುಕಾಚಾರ್ಯ ಅವರಿಗೆ ಬೇಡವೇ ಬೇಡ. ಬುಧವಾರದ ಅಧಿವೇಶನಕ್ಕೆ ಮುನ್ನ ಶಾಸಕಾಂಗ ಸಭೆ ಕರೆದು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರೇಣುಕಾಚಾರ್ಯ ಬೆಂಬಲಿಗರಾದ ರೋಣದ ಶಾಸಕ ಕಳಕಪ್ಪ ಬಂಡಿ, ರೇಣುಕಾಚಾರ್ಯ ಏಕೆ ಸಚಿವರಾಗಬಾರದು. ಆಕಸ್ಮಾತ್ ರೇಣುಕಾಚಾರ್ಯಗೆ ಮಂತ್ರಿಗಿರಿ ತಪ್ಪಿದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈವರೆಗೊ ರೇಣುಕಾಚಾರ್ಯ ಪರವಿದ್ದ ಎಸ್ ಕೆ ಬೆಳ್ಳುಬ್ಬಿ ರೇಣುಕಾಚಾರ್ಯ ಅವರ ಮಂತ್ರಿಗಿರಿ ವಿರೋಧಿಸಿ ಸಹಿ ಹಾಕಿರುವುದು ವಿಚಿತ್ರವಾಗಿದೆ. ನನ್ನ ವಿರುದ್ಧ ಯಾವುದೇ ಸಹಿ ಸಂಗ್ರಹಣೆ ನಡೆದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ನಾನು, ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನೇನೂ ನಡೆಯುತ್ತಿದೆ. ಏನಾದರೂ ಆಗಬಹುದು...
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications