ಬಿಜೆಪಿ ಅಂದ್ರೆ ಭಾರತೀಯ ಜಗಳ ಪಾರ್ಟಿ!

ಈ ಮೊದಲು ರೆಡ್ಡಿಗಳು ಅಬ್ಬರಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಿತ್ತೊಗೆಯಬೇಕು ಎಂದು ಶತಾಯಗತಾಯ ಪ್ರಯತ್ನ ನಡೆಸಿದರು. ಆದರೆ, ಹೈಕಮಾಂಡ್ ಮಧ್ಯೆ ಪ್ರವೇಶದಿಂದ ಬಿಕ್ಕಟ್ಟು ಶಮನಗೊಂಡಿತು. ಅದು ಮುಗಿದು ತಿಂಗಳು ಕಳೆದಿಲ್ಲ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತವರ ಗ್ಯಾಂಗ್ ಭಿನ್ನಮತೀಯ ಚಟುವಟಿಕೆ ಆರಂಭಿಸಿ ಸರಕಾರದ ಬುಡಕ್ಕೆ ನೀರು ಬೀಡುವ ಕೆಲಸಕ್ಕೆ ಕೈಹಾಕಿದರು. ಗುರುವಾರ ಮಂತ್ರಿ ಮಾಡುವ ಭರವಸೆಯನ್ನು ರೇಣುಕಾಚಾರ್ಯಗೆ ನೀಡಿ ನಿರಮ್ಮಳವಾಗಿದ್ದ ಯಡಿಯೂರಪ್ಪ ಅವರಿಗೆ ಮತ್ತೊಂದು ಪೀಕಲಾಟ ಶುರುವಾಗಿದೆ.
ಸದ್ಯ ಬಿಜೆಪಿ ಪಕ್ಷ ಮತ್ತು ಸರಕಾರದಲ್ಲಿ ಏನು ನಡೆಯುತ್ತದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಾಗಲಿ, ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿಗಾಗಲಿ, ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರಿಗಾಗಲಿ ತಿಳಿಯುತ್ತಿಲ್ಲ. ಎಲ್ಲರೂ ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ. ಗಣಿಧಣಿಗಳು ಮಾತ್ರ ನಮಗೆ ಸಂಬಂಧಿಸಿದ್ದಲ್ಲ ಎಂದು ತಣ್ಣಗೆ ಬಳ್ಳಾರಿಯಲ್ಲಿ ತಮ್ಮ ವ್ಯವಹಾರದಲ್ಲಿ ಮಗ್ನರಾಗಿದ್ದಾರೆ. ಆದರೆ, ನಿಜವಾಗಿ ನರಳತೊಡಗಿರುವುದು ರಾಜ್ಯದ ಆರು ಕೋಟಿ ಮತದಾರರು. ಹಿಡಿ ಶಾಪ ಹಾಕುತ್ತಿರುವವರು ಕೂಡಾ ಇದೇ ಜನತೆ.
ಯಡಿಯೂರಪ್ಪ ಭಿನ್ನಮತ ಶಮನಗೊಳಿಸಲು ರೇಣುಕಾಚಾರ್ಯಗೆ ಸಚಿವ ಸ್ಥಾನ ನೀಡಲು ಮುಂದಾಗಿದ್ದಾರೆ. ಆದರೆ, ರೇಣುಕಾಚಾರ್ಯ ಅವರನ್ನು ವಿರೋಧಿಸುವ ಗುಂಪೊಂದು ಸೃಷ್ಟಿಯಾಗಿದೆ. ಭಿನ್ನಮತೀಯ ಚಟುವಟಿಕೆ ನಡೆಸಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವ ರೇಣುಕಾಚಾರ್ಯಗೆ ಮಂತ್ರಿಗಿರಿ ನೀಡಬಾರದು. ಅದರ ಬದಲಾಗಿ ಪಕ್ಷದಲ್ಲಿರುವ ಹಿರಿಯ ಶಾಸಕರಿಗೆ ಮಂತ್ರಿಗಿರಿ ನೀಡಿ ಎಂದು ಸುಮಾರು 35 ಮಂದಿ ಶಾಸಕರು ಸಹಿ ಸಂಗ್ರಹಿಸಿ ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ ಮಂತ್ರಿಗಿರಿಯ ವಿರೋಧಿ ಗುಂಪಿನ ನಾಯಕ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಪಕ್ಷದಲ್ಲಿ ಹಿರಿಯ ಶಾಸಕರಾದ ಶಂಕರಲಿಂಗೇಗೌಡ, ರಾಮದಾಸ್, ನಾರಾಯಣಸ್ವಾಮಿ, ಎಸ್ ಕೆ ಬೆಳ್ಳುಬ್ಬಿ, ಸಿಟಿ ರವಿ ಅವರನ್ನು ಮಂತ್ರಿ ಮಾಡಲಿ. ರೇಣುಕಾಚಾರ್ಯ ಅವರಿಗೆ ಬೇಡವೇ ಬೇಡ. ಬುಧವಾರದ ಅಧಿವೇಶನಕ್ಕೆ ಮುನ್ನ ಶಾಸಕಾಂಗ ಸಭೆ ಕರೆದು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರೇಣುಕಾಚಾರ್ಯ ಬೆಂಬಲಿಗರಾದ ರೋಣದ ಶಾಸಕ ಕಳಕಪ್ಪ ಬಂಡಿ, ರೇಣುಕಾಚಾರ್ಯ ಏಕೆ ಸಚಿವರಾಗಬಾರದು. ಆಕಸ್ಮಾತ್ ರೇಣುಕಾಚಾರ್ಯಗೆ ಮಂತ್ರಿಗಿರಿ ತಪ್ಪಿದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈವರೆಗೊ ರೇಣುಕಾಚಾರ್ಯ ಪರವಿದ್ದ ಎಸ್ ಕೆ ಬೆಳ್ಳುಬ್ಬಿ ರೇಣುಕಾಚಾರ್ಯ ಅವರ ಮಂತ್ರಿಗಿರಿ ವಿರೋಧಿಸಿ ಸಹಿ ಹಾಕಿರುವುದು ವಿಚಿತ್ರವಾಗಿದೆ. ನನ್ನ ವಿರುದ್ಧ ಯಾವುದೇ ಸಹಿ ಸಂಗ್ರಹಣೆ ನಡೆದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ನಾನು, ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಏನೇನೂ ನಡೆಯುತ್ತಿದೆ. ಏನಾದರೂ ಆಗಬಹುದು...
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications