ವಿಷಕಾರಕ ಎಂಡೋಸಲ್ಫಾನ್ ನಿಷೇಧಕ್ಕೆ ಆಗ್ರಹ

ಎಂಡೋಸಲ್ಫಾನ್ ಸಿಂಪಡನೆಯಿಂದ ಮಕ್ಕಳು ಹುಟ್ಟುಕುರುಡರಾಗಿ, ಅಂಗವಿಕಲರಾಗಿ, ಕ್ಯಾನ್ಸರ್ ಪೀಡಿತರಾಗಿ ಜನಿಸುತ್ತಿದ್ದಾರೆ. ಅದರ ಸಿಂಪಡನೆಯಿಂದ ನೆಲ, ನೀರು, ವಾಯು ವಿಷಪೂರಿತವಾಗುತ್ತಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ಮತ್ತು ಪುತ್ತೂರು ಹಳ್ಳಿಗಳಲ್ಲಿ ಎಂಡೋಸಲ್ಫಾನ್ ಬಳಕೆಯಿಂದಾಗಿ 137 ಜನ ಸಾವಿಗೀಡಾಗಿದ್ದಾರೆ, 300ಕ್ಕೂ ಹೆಚ್ಚು ಜನ ಅಂಗವಿಕಲರಾಗಿದ್ದಾರೆ. ಇದು ಇವೆರಡು ಹಳ್ಳಿಗಳ ಕಥೆ ಮಾತ್ರ.
ಎಂಡೋಸಲ್ಫಾನ್ ಬಳಕೆಯಿಂದಾಗುವ ಅನಾಹುತದಿಂದ ಮೊದಲು ಎಚ್ಚೆತ್ತುಕೊಂಡಿದ್ದು ಕೇರಳ. ಕಾಸರಗೋಡು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಮರಣಮೃದಂಗ ಬಾರಿಸಿದ್ದರಿಂದ ಅದರ ಬಳಕೆಯ ತಡೆಗೆ ಕ್ರಮ ತೆಗೆದುಕೊಂಡಿತು. ಇದೇ ಅನಾಹುತ ಅಮೆರಿಕದಲ್ಲೋ ಮತ್ತಾವುದೋ ದೇಶದಲ್ಲೋ ಆಗಿದ್ದರೆ ಅದರ ಪರಿಣಾವೇ ಬೇರೆಯಾಗಿರುತ್ತಿತ್ತು.
ನಮ್ಮ ಆರೋಗ್ಯ ಸಚಿವರು ಎಲ್ಲಿದ್ದಾರೋ ಗೊತ್ತಿಲ್ಲ. ಎಂಡೋಸಲ್ಫಾನ್ ಬಳಕೆಯಿಂದಾಗುತ್ತಿರುವ ದುಷ್ಪರಿಣಾಮದ ಕುರಿತು ಬಂದಿರುವ ಅನೇಕ ವರದಿಗಳಿಂದ ಎಚ್ಚೆತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಅದರ ನಿಷೇಧಕ್ಕೆ ಕೇಂದ್ರಕ್ಕೆ ಮನವಿ ಮಾಡುವುದಾಗಿ ವಾಗ್ದಾನ ನೀಡಿದ್ದಾರೆ. ಮಾಜಿ ಗ್ರಾಮೀಣಾಬಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಈಕುರಿತು ಎತ್ತಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ವಿರೋಧ ಪಕ್ಷದ ಶಾಸಕರು ಕೂಡ ಎಂಡೋಸಲ್ಫಾನ್ ನಿಷೇಧಕ್ಕೆ ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿಗಳ ಜತೆಗಿನ ಮುಂಬರುವ ಭೇಟಿಯಲ್ಲಿ ಇದರ ಬಗ್ಗೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications