ರೇಣುಕ ಸಚಿವರಾಗಿ ಗುರುವಾರ ಪ್ರಮಾಣ ವಚನ

ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ನಾಳೆ ಬೆಳಗ್ಗೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂದಿನ ವರ್ಷದ ಮಾರ್ಚ್ ನಲ್ಲಿ ಎಲ್ಲ ಸಚಿವರ ರಾಜೀನಾಮೆ ಪಡೆದು ಸಂಪುಟ ಪುನರ್ ರಚನೆ ಮಾಡುವುದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಗುರುವಾರ ಬೆಳಗ್ಗೆ 10.10 ರಿಂದ 10.30ರೊಳಗೆ ಪ್ರಮಾಣ ವಚನ ಸ್ವೀಕರಿಸುವ ಮಹೂರ್ತ ಫಿಕ್ಸ್ ಆಗಿದ್ದು, ರೇಣುಕಾಚಾರ್ಯ ಅವರಿಗೆ ವಸತಿ ಖಾತೆ ದೊರೆಯುವ ಸಾಧ್ಯತೆ ಇದೆ.
ಭಿನ್ನಮತೀಯ ಚಟುವಟಿಕೆ ನಡೆಸುವ ಮೂಲಕ ಪಕ್ಷಕ್ಕೆ ಘನತೆಗೆ ಧಕ್ಕೆ ತಂದಿರುವ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಬೆಂಗಳೂರು ನಗರ ಶಾಸಕರ ಗುಂಪೊಂದು ವಿರೋಧ ವ್ಯಕ್ತಪಡಿಸಿ ಶಾಸಕರ ಸಹಿ ಸಂಗ್ರಹಣೆ ನಡೆಸಿದ್ದರು. ಜೊತೆಗೆ ಬುಧವಾರವೇ ಶಾಸಕಾಂಗ ಸಭೆ ಕರೆಯಬೇಕು ಎಂದು ಶಾಸಕರು ಆಗ್ರಹಿಸಿದ್ದರು. ಇದರಿಂದಾಗಿ ಬಿಜೆಪಿ ಭಿನ್ನಮತ ಮತ್ತಷ್ಟು ಬಿಕ್ಕಟ್ಟಿಗೆ ಎಡೆಮಾಡಿಕೊಟ್ಟಿತ್ತು. ರೇಣುಕಾಚಾರ್ಯ ಅವರು ಸಚಿವರಾಗುವುದನ್ನು ವಿರೋಧಿಸಿದ ಬಣದ ವಿರುದ್ದ ರೇಣುಕಾಚಾರ್ಯ ಅವರ ಬೆಂಬಲಿಗರು ನಾವು ಸಹಿ ಸಂಗ್ರಹಣೆ ಮುಂದಾಗಿತ್ತು. ರೇಣುಕಾಚಾರ್ಯ ಏಕೆ ಸಚಿವರಾಗಬಾರದು ಎಂಬುದು ಅವರ ಪ್ರಶ್ನೆಯಾಗಿತ್ತು.
ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ ಬಿಜೆಪಿ ನಾಯಕರು ರೇಣುಕಾಚಾರ್ಯ ಅವರನ್ನು ವಿರೋಧಿಸುತ್ತಿರುವ ಬಣ ಶಾಸಕರ ಮನವೂಲಿಸಿ ತಣ್ಣಗಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸರಕಾರ ಮತ್ತು ಪಕ್ಷದ ಹಿತದೃಷ್ಟಯಿಂದ ವಿರೋಧವನ್ನು ಕೈಬಿಡಲಾಗಿದೆ ಎಂದು ರೇಣುಕಾಚಾರ್ಯ ವಿರೋಧಿ ಬಣದ ಗುಂಪಿನ ಶಾಸಕರಾದ ಸತೀಶೆ ರಡ್ಡಿ, ಎಸ್ ಆರ್ ವಿಶ್ವನಾಥ, ಸುರೇಶಗೌಡ ತಿಳಿಸಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಉಂಟಾಗಿದ್ದ ಮತ್ತೊಂದು ಸುತ್ತಿನ ಭಿನ್ನಮತ ಶಮನಗೊಂಡಂತಾಗಿದೆ. ಕಳೆದ ಎರಡು ತಿಂಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡೆದ್ದು, ಬ್ಲಾಕ್ ಮೇಲ್ ರಾಜಕಾರಣ ಮಾಡಿದ ರೇಣುಕಾಚಾರ್ಯ ಸಚಿವರಾಗಲಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications