ಎಂಬತ್ತಾರಕ್ಕೆ ಅಡಿಯಿಟ್ಟ ಎ ಬಿ ವಾಜಪೇಯಿ
ನವದೆಹಲಿಯ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ಅವರ ನಿವಾಸಕ್ಕೆ ಮನಮೋಹನ್ ಸಿಂಗ್ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದಕ್ಕೂ ಮುನ್ನ ಮಾಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ರಾಜ್ಯಸಭೆಯ ವಿರೋಧ ಪಕ್ಷ ನಾಯಕ ಅರುಣ್ ಜೇಟ್ಲಿ ಸಹ ವಾಜಪೇಯಿ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ಮಾಜಿ ಕೇಂದ್ರ ಸಚಿವ ವಿಜಯ್ ಗೋಯಲ್, ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಬ್ರಿಜೇಟ್ ಮಿಶ್ರಾ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಎಂಪಿ ಅರುಣ್ ಶೌರಿ ಅವರು ವಾಜಪೇಯಿ ಅವರನ್ನು ಭೇಟಿ ಮಾಡಿದ ಪ್ರಮುಖರು.
ವಾಜಪೇಯಿ ಅವರ ಅಭಿಮಾನಿ ರಾಜೇಶ್ ಗೆಹ್ ಲೋಟ್ 186 ಅಡಿ ಉದ್ದದ 160 ಪೋಸ್ಟರ್ ಗಳ ಮೂಲಕ ಬಿಜೆಪಿಯ ಹಿರಿಯ ಮುತ್ಸದ್ದಿಗೆ ಶುಭಕಾಮನೆಗಳನ್ನು ಕೋರಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೂ ವಾಜಪೇಯಿ ಅವರಿಗೆ ಶುಭ ಕೋರಿದರು.
ಕೆಲ ಕಾಲದಿಂದ ಅಸ್ವಸ್ಥರಾಗಿರುವ ವಾಜಪೇಯಿ ಅವರು 2009ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಇಂದು ಅವರನ್ನು ಭೇಟಿ ಮಾಡಿದ ರಾಜಕೀಯ ಮುಖಂಡರು ಹಾರೈಸಿದರು.