ರಾಸಲೀಲೆ : ತಿವಾರಿ ಅವರೊಬ್ಬರೇ ಅಲ್ಲರಿ

ಗಣಿ ಲೈಸೆನ್ಸ್ ಮತ್ತು ಮತ್ತಿತರರಿಗೆ ಉದ್ಯೋಗ ಕೊಡಿಸುವ ಆಮಿಷ ವೊಡ್ಡಿ ರಾಸಲೀಲೆಯಲ್ಲಿ ತೊಡಗಿ ನಂತರ ತಿವಾರಿ ಮೋಸ ಮಾಡಿದ್ದರಿಂದ ಸೆಕ್ಸ್ ಟೇಪನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾಗಿ ರಾಧಿಕಾ ಎಂಬ ಯುವತಿ ಹೇಳಿದ್ದಾಳೆ.
ಈ ಲೈಂಗಿಕ ಹಗರಣ ಕೇಂದ್ರ ಆಡಳಿತದಲ್ಲಿರುವ ಯುಪಿಎ ಸರಕಾರಕ್ಕೆ ಭಾರೀ ಮುಜುಗರ ಉಂಟುಮಾಡಿದೆ. ತಿವಾರಿ ಅವರನ್ನು ಮಾಜಿ ಪ್ರಧಾನಿ ದಿವಂಗತ ನರಸಿಂಹರಾವ್ ಅವರು ಪ್ರಧಾನಿ ಆಗುವ ಮೊದಲು ಪ್ರಧಾನಿ ಅಭ್ಯರ್ಥಿಯೆಂದು ಬಿಂಬಿಸಲಾಗಿತ್ತು. ತಿವಾರಿ ಅವರು ಅಖಂಡ ಉತ್ತರ ಪ್ರದೇಶ ಮತ್ತು ಉತ್ತಾರಾಖಂಡದ ಮುಖ್ಯಮಂತ್ರಿ ಕೂಡ ಆಗಿದ್ದರು. ಅಂತಹ ಉನ್ನತ ಸ್ಥಾನದಲ್ಲಿದ್ದ ವ್ಯಕ್ತಿ ಇಂಥ ಹಗರಣದಲ್ಲಿ ಭಾಗಿಯಾಗಿದ್ದು ಕಾಂಗ್ರೆಸ್ಸಿನ ವರ್ಚಸ್ಸಿಗೆ ಧಕ್ಕೆ ತಂದಿದೆ.
ರಾಜೀನಾಮೆ ಅಂಗೀಕಾರ : ಅನಾರೋಗ್ಯದ ಕಾರಣ ನೀಡಿ ಸಲ್ಲಿಸಿರುವ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಂಗೀಕರಿಸಿದ್ದಾರೆ.
ಇದೊಂದೇ ಅಲ್ಲ : ಆದರೆ, ರಾಜಕಾರಣಿಗಳನ್ನು ಬೆನ್ನತ್ತಿರುವ ಸೆಕ್ಸ್ ಹಗರಣಗಳು ಇದು ಮೊದಲೇನಲ್ಲ. ಕಾಂಗ್ರೆಸ್, ಬಿಜೆಪಿ, ಆರ್ಎಸ್ಎಸ್ ಮುಖಂಡರನ್ನು ಕೂಡ ಲೈಂಗಿಕ ಹಗರಣಗಳು ಹಣ್ಣುನೀರು ಮಾಡಿವೆ. ಕೆಲವೇ ವಾರಗಳ ಹಿಂದೆ ಕೇರಳದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಮೋಹನ್ ಉನ್ನಿಥನ್ ಮಹಿಳೆಯೊಂದಿಗೆ ಸಿಕ್ಕಿಬಿದ್ದಿದ್ದರು. ವೇಶ್ಯಾವಾಟಿಕೆಗೆ ಕುಮ್ಮಕ್ಕು ನೀಡಿದ ಆರೋಪ ಅವರ ಮೇಲಿದೆ.
ಕಳೆದ ಮಹಾಚುನಾವಣೆ ಸಮಯದಲ್ಲಿ ಸಮಾಜವಾದಿ ಪಕ್ಷದ ಜಯಪ್ರದಾ ಅವರ ನಗ್ನ ಚಿತ್ರಗಳನ್ನು ಎಲ್ಲೆಂದರಲ್ಲಿ ತೂರಾಡಿ ಅದೇ ಪಕ್ಷದ ಅಜಮ್ ಖಾನ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಆ ಚಿತ್ರಗಳು ತನ್ನವಲ್ಲವೇ ಅಲ್ಲ, ಅವು ಸೃಷ್ಟಿಸಿದವು ಎಂದು ಜಯಪ್ರದಾ ವಾದಿಸಿ ಚುನಾವಣೆಯಲ್ಲಿ ಜಯಪ್ರದರಾಗಿದ್ದರು.
ಹಿಂದೆ, 2005ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ್ ಜೋಶಿ ಅವರು ಅಪರಿಚಿತ ಮಹಿಳೆಯೊಂದಿಗೆ ಕಾಮಕೇಳಿ ನಡೆಸಿದ ವಿಡಿಯೋ ಟೇಪ್ ಪಕ್ಷವನ್ನು ಮುಜುಗರಕ್ಕೀಡು ಮಾಡಿತ್ತು. 2003ರಲ್ಲಿ ಉತ್ತರ ಪ್ರದೇಶದ ಮಂತ್ರಿಯಾಗಿದ್ದ ಅಮರಮಣಿ ತ್ರಿಪಾಠಿ ಕವಯಿತ್ರಿ ಮಧುಮಿತಾ ಶುಕ್ಲಾ ಅವರೊಂದಿಗೆ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದರು. ಭೀಕರವಾಗಿ ಕೊಲೆಯಾಗಿದ್ದ ಮಧುಮಿತಾ ಉದರದಲ್ಲಿದ್ದ ಮಗು ತ್ರಿಪಾಠಿಯದೇ ಎಂದು ಡಿಎನ್ಎ ಪರೀಕ್ಷೆ ದೃಢಪಡಿಸಿತ್ತು.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications