ರಾಸಲೀಲೆ : ತಿವಾರಿ ಅವರೊಬ್ಬರೇ ಅಲ್ಲರಿ

ಗಣಿ ಲೈಸೆನ್ಸ್ ಮತ್ತು ಮತ್ತಿತರರಿಗೆ ಉದ್ಯೋಗ ಕೊಡಿಸುವ ಆಮಿಷ ವೊಡ್ಡಿ ರಾಸಲೀಲೆಯಲ್ಲಿ ತೊಡಗಿ ನಂತರ ತಿವಾರಿ ಮೋಸ ಮಾಡಿದ್ದರಿಂದ ಸೆಕ್ಸ್ ಟೇಪನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾಗಿ ರಾಧಿಕಾ ಎಂಬ ಯುವತಿ ಹೇಳಿದ್ದಾಳೆ.
ಈ ಲೈಂಗಿಕ ಹಗರಣ ಕೇಂದ್ರ ಆಡಳಿತದಲ್ಲಿರುವ ಯುಪಿಎ ಸರಕಾರಕ್ಕೆ ಭಾರೀ ಮುಜುಗರ ಉಂಟುಮಾಡಿದೆ. ತಿವಾರಿ ಅವರನ್ನು ಮಾಜಿ ಪ್ರಧಾನಿ ದಿವಂಗತ ನರಸಿಂಹರಾವ್ ಅವರು ಪ್ರಧಾನಿ ಆಗುವ ಮೊದಲು ಪ್ರಧಾನಿ ಅಭ್ಯರ್ಥಿಯೆಂದು ಬಿಂಬಿಸಲಾಗಿತ್ತು. ತಿವಾರಿ ಅವರು ಅಖಂಡ ಉತ್ತರ ಪ್ರದೇಶ ಮತ್ತು ಉತ್ತಾರಾಖಂಡದ ಮುಖ್ಯಮಂತ್ರಿ ಕೂಡ ಆಗಿದ್ದರು. ಅಂತಹ ಉನ್ನತ ಸ್ಥಾನದಲ್ಲಿದ್ದ ವ್ಯಕ್ತಿ ಇಂಥ ಹಗರಣದಲ್ಲಿ ಭಾಗಿಯಾಗಿದ್ದು ಕಾಂಗ್ರೆಸ್ಸಿನ ವರ್ಚಸ್ಸಿಗೆ ಧಕ್ಕೆ ತಂದಿದೆ.
ರಾಜೀನಾಮೆ ಅಂಗೀಕಾರ : ಅನಾರೋಗ್ಯದ ಕಾರಣ ನೀಡಿ ಸಲ್ಲಿಸಿರುವ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಂಗೀಕರಿಸಿದ್ದಾರೆ.
ಇದೊಂದೇ ಅಲ್ಲ : ಆದರೆ, ರಾಜಕಾರಣಿಗಳನ್ನು ಬೆನ್ನತ್ತಿರುವ ಸೆಕ್ಸ್ ಹಗರಣಗಳು ಇದು ಮೊದಲೇನಲ್ಲ. ಕಾಂಗ್ರೆಸ್, ಬಿಜೆಪಿ, ಆರ್ಎಸ್ಎಸ್ ಮುಖಂಡರನ್ನು ಕೂಡ ಲೈಂಗಿಕ ಹಗರಣಗಳು ಹಣ್ಣುನೀರು ಮಾಡಿವೆ. ಕೆಲವೇ ವಾರಗಳ ಹಿಂದೆ ಕೇರಳದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಮೋಹನ್ ಉನ್ನಿಥನ್ ಮಹಿಳೆಯೊಂದಿಗೆ ಸಿಕ್ಕಿಬಿದ್ದಿದ್ದರು. ವೇಶ್ಯಾವಾಟಿಕೆಗೆ ಕುಮ್ಮಕ್ಕು ನೀಡಿದ ಆರೋಪ ಅವರ ಮೇಲಿದೆ.
ಕಳೆದ ಮಹಾಚುನಾವಣೆ ಸಮಯದಲ್ಲಿ ಸಮಾಜವಾದಿ ಪಕ್ಷದ ಜಯಪ್ರದಾ ಅವರ ನಗ್ನ ಚಿತ್ರಗಳನ್ನು ಎಲ್ಲೆಂದರಲ್ಲಿ ತೂರಾಡಿ ಅದೇ ಪಕ್ಷದ ಅಜಮ್ ಖಾನ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಆ ಚಿತ್ರಗಳು ತನ್ನವಲ್ಲವೇ ಅಲ್ಲ, ಅವು ಸೃಷ್ಟಿಸಿದವು ಎಂದು ಜಯಪ್ರದಾ ವಾದಿಸಿ ಚುನಾವಣೆಯಲ್ಲಿ ಜಯಪ್ರದರಾಗಿದ್ದರು.
ಹಿಂದೆ, 2005ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ್ ಜೋಶಿ ಅವರು ಅಪರಿಚಿತ ಮಹಿಳೆಯೊಂದಿಗೆ ಕಾಮಕೇಳಿ ನಡೆಸಿದ ವಿಡಿಯೋ ಟೇಪ್ ಪಕ್ಷವನ್ನು ಮುಜುಗರಕ್ಕೀಡು ಮಾಡಿತ್ತು. 2003ರಲ್ಲಿ ಉತ್ತರ ಪ್ರದೇಶದ ಮಂತ್ರಿಯಾಗಿದ್ದ ಅಮರಮಣಿ ತ್ರಿಪಾಠಿ ಕವಯಿತ್ರಿ ಮಧುಮಿತಾ ಶುಕ್ಲಾ ಅವರೊಂದಿಗೆ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದರು. ಭೀಕರವಾಗಿ ಕೊಲೆಯಾಗಿದ್ದ ಮಧುಮಿತಾ ಉದರದಲ್ಲಿದ್ದ ಮಗು ತ್ರಿಪಾಠಿಯದೇ ಎಂದು ಡಿಎನ್ಎ ಪರೀಕ್ಷೆ ದೃಢಪಡಿಸಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications