ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹಿರಣ್ಣಯ್ಯ ಬಯಲು ರಂಗಮಂದಿರ ಉದ್ಘಾಟನೆ
ತುಮಕೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುರುವೇಕೆರೆ ಪ.ಪಂ. ಹಾಗೂ ತಾಲೂಕು ಕಲಾವಿದರ ಒಕ್ಕೂಟದ ವತಿಯಿಂದ ಸಂಸದ ಜಿ.ಎಸ್, ಬಸವರಾಜು ಕೆ.ಹಿರಣ್ಣಯ್ಯನವರ ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಶಾಸಕ ಎಂ.ಟಿ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂಡಿ ಲಕ್ಷ್ಮೀನಾರಾಯಣ್, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಜಗ್ಗೇಶ್ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಸೋಮಶೇಖರ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಅಂದು ರಾತ್ರಿ 8.30 ಕ್ಕೆ ಮಾಸ್ಟರ್ ಹಿರಣ್ಣಯ್ಯ ಮಿತ್ರ ಮಂಡಳಿಯವರಿಂದ 'ಮಕ್ಮಲ್ ಟೋಪಿ' ಹಾಸ್ಯ ನಾಟಕ ಪ್ರದರ್ಶನವಿರುತ್ತದೆ.
Comments
Story first published: Monday, December 28, 2009, 15:22 [IST]