ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಆಂಧ್ರ ನೂತನ ರಾಜ್ಯಪಾಲರಾಗಿ ನರಸಿಂಹನ್
ಆಂಧ್ರಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ ಆರ್ ದೇವ್ ಅವರು ನರಸಿಂಹನ್ ಅವರಿಗೆ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಕೆ ರೋಸಯ್ಯ, ಸಂಪುಟದ ಹಿರಿಯ ಸಚಿವರು, ಪ್ರತಿಪಕ್ಷಗಳ ನಾಯಕರು, ಮುಖ್ಯ ಕಾರ್ಯದರ್ಶಿ ರಮಾಕಾಂತ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಸ್ತುತ ಜಾರ್ಖಂಡ್ ರಾಜ್ಯಪಾಲರಾಗಿರುವ ನರಸಿಂಹನ್ ಅವರಿಗೆ ಆಂಧ್ರಪ್ರದೇಶ ರಾಜ್ಯಪಾಲರ ಸ್ಥಾನ ಹೆಚ್ಚುವರಿ ಸ್ಥಾನ ನೀಡಲಾಗಿದೆ. ಲೈಂಗಿಕ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಎನ್ ಡಿ ತಿವಾರಿ ಅವರು ಆರೋಗ್ಯ ಸಮಸ್ಯೆ ನೆಪವೊಡ್ಡಿ ರಾಜ್ಯಪಾಲ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದರು.
Comments
ಹೈದರಾಬಾದ್ andhra pradesh ಆಂಧ್ರ ಪ್ರದೇಶ jharkhand ಜಾರ್ಖಂಡ್ ರಾಜ್ಯಪಾಲ governor ತೆಲಂಗಾಣ ಪ್ರತ್ಯೇಕ ರಾಜ್ಯ ಎನ್ ಡಿ ತಿವಾರಿ nd tiwari
Story first published: Monday, December 28, 2009, 15:20 [IST]