Get Updates
Get notified of breaking news, exclusive insights, and must-see stories!

ಬಿಜೆಪಿ ಹತ್ತು ಶಾಸಕರು ರಾಜೀನಾಮೆಗೆ ನಿರ್ಧಾರ

ten dissident bjp mla to resign
ಬೆಂಗಳೂರು, ಡಿ.29: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಹೊಸ ತಿರುವು ಪಡೆದಿದ್ದ್ದು ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರ ಇಕ್ಕಟ್ಟಿಗೆ ಸಿಲುಕಿದೆ. ಬಿಜೆಪಿಯ ಹತ್ತಕ್ಕೂ ಹೆಚ್ಚು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮನ್ನು ಪಕ್ಷದ ನಿಷ್ಠಾವಂತರು ಎಂದು ಕರೆದುಕೊಂಡಿರುವ ಈ ಶಾಸಕರು, ವಿಧಾನಸಭೆ ಸ್ಪೀಕರ್ ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಸಂಬಂಧ ಸಮಯ ನಿಗದಿಪಡಿಸುವಂತೆ ಸ್ಪೀಕರ್ ಅವರನ್ನು ಕೋರಿದ್ದಾರೆ.

ಶಾಸಕರಾದ ಕೊಡಗಿನ ಅಪ್ಪಚ್ಚು ರಂಜನ್, ಮೈಸೂರಿನ ಎ.ಎಸ್.ರಾಮದಾಸ್,ಚಿಕ್ಕಮಗಳೂರಿನ ಸಿ.ಟಿ.ರವಿ, ಬಾಗಲಕೋಟದ ಚರಂತಿಮಠ, ಆನೇಕಲ್ ನಾರಾಯಣಸ್ವಾಮಿ ಮತ್ತಿತರರು ಈ ತಂಡದಲ್ಲಿದ್ದಾರೆ. ಮೊದಲು ಮಂಗಳವಾರ ಬೆಳಗ್ಗೆ ಈ ಶಾಸಕರು ಸಭೆ ಸೇರಿ ಚರ್ಚಿಸಿದ ಬಳಿಕ ರಾಜೀನಾಮೆ ನೀಡುವ ಕುರಿತು ಒಮ್ಮತದನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿದ್ದಾರೆ.

ಸರಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದಬೇಸತ್ತು, ಸರಕಾರ ಉಳಿಸಿ ಎಂದು ಒತ್ತಾಯಿಸಿ ರಾಜೀನಾಮೆ ನೀಡುತ್ತಿರುವುದಾಗಿ ಈ ಶಾಸಕರು ಕಾರಣ ಕೊಡುತ್ತಾರೆ.ಮುಂದೇನಾಗುತ್ತದೆ ಎಂದು ನಾಳೆವರೆಗೆ ಕಾದು ನೋಡಿ ಎಂದು ಈ ಶಾಸಕರು ಹೇಳುತ್ತಾರೆ. ಇವರು ಕರೆದಿರುವ ಸಭೆಯಲ್ಲಿ 34ಕ್ಕೂ ಹೆಚ್ಚಿನ ಶಾಸಕರುಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+