ನಾಯಿಗಳಂತೆ ಕಿತ್ತಾಡಿದ ನಮ್ಮ ಲೀಡರ್ಸ್, ಯಾರವರು?

ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದ ಸ್ಪೀಕರ್ ಸ್ಥಾನಕ್ಕೆ ಇಂದು ನಿಗದಿಯಂತೆ ಚುನಾವಣೆ ನಡೆಯಬೇಕಿತ್ತು. ಆದರೆ, ಕನ್ನಡ ಚಿತ್ರರಂಗದ ಮೇರುನಟ ಡಾ ವಿಷ್ಣುವರ್ಧನ್ ಅವರ ಅಕಾಲಿಕ ಮರಣವೇ ವಿಧಾನಸೌಧದಲ್ಲಿ ನಡೆದ ದಾಂಧಲೆಗೆ ಕಾರಣವಾಯಿತು. ಚುನಾವಣೆ ಪ್ರಕ್ರಿಯೆಗಳು ಎಲ್ಲ ಮುಗಿದಿವೆ. ಸ್ಪೀಕರ್ ಚುನಾವಣೆ ನಂತರ ಕಲಾಪ ಮುಂದೂಡುವುದಾಗಿ ಯೋಜನೆ ಆಡಳಿತ ಪಕ್ಷದ್ದಾದರೆ, ಮೇರು ನಟ ನಿಧನರಾಗಿದ್ದಾರೆ, ಹೀಗಾಗಿ ಚುನಾವಣೆ ನಡೆಸುವುದು ಬೇಡ. ಇವತ್ತಿನ ಬದಲಿಗೆ ನಾಳೆ ಚುನಾವಣೆ ನಡೆಸಿದರಾಯಿತು ಎಂಬುದು ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಿಲುವು. ಈ ಕಾರಣದಿಂದ ಸದನ ರಣರಂಗವಾಯಿತು.
ಚುನಾವಣೆ ನಡೆಸಕೂಡದು ಎಂದು ಸರಕಾರದ ಕ್ರಮ ವಿರೋಧಿಸಿದ ಪ್ರತಿಪಕ್ಷಗಳ ಶಾಸಕರು ಬಾವಿಗಿಳಿದು ಪ್ರತಿಭಟನೆ ಆರಂಭಿಸಿದರು. ಒಂದು ಹಂತದಲ್ಲಿ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಅವರು ಸ್ಪೀಕರ್ ಮುಂದಿದ್ದ ಮೈಕ್ ನ್ನು ಕಿತ್ತು ಬಿಸಾಡಿ ಕೂಗಾಟ ಆರಂಭಿಸಿದರು. ಆಗ ಮಾತಿನ ಚಟಮಕಿ ನಡೆಯಿತು. ಕೈಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ಇದು ಯಾವುದನ್ನು ಲೆಕ್ಕಿಸದ ಸರಕಾರ ಸ್ಪೀಕರ್ ಚುನಾವಣೆ ನಡೆಯಿತು. ಅಂತಿಮವಾಗಿ ಕೆ ಜಿ ಬೋಪಯ್ಯ ಅವರು ಸ್ಪೀಕರ್ ಆಗಿ ಆಯ್ಕೆಯಾದರು.
ಇಂದು ಸದನದಲ್ಲಿ ಪ್ರತಿಪಕ್ಷಗಳು ನಡೆದುಕೊಂಡ ರೀತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಲಿನ ಭಯ ಹಾಗೂ ಹತಾಶೆ ಮನೋಭಾವದ ಕೆಲಸ ಎಂದು ಅವರು ಟೀಕಿಸಿದ್ದಾರೆ. ಪ್ರತಿಯಾಗಿ ಮಾತನಾಡಿರುವ ಸಿದ್ಧರಾಮಯ್ಯ, ಸರಕಾರ ದುರುಳ ವರ್ತನೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications