ನಾಯಿಗಳಂತೆ ಕಿತ್ತಾಡಿದ ನಮ್ಮ ಲೀಡರ್ಸ್, ಯಾರವರು?

ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದ ಸ್ಪೀಕರ್ ಸ್ಥಾನಕ್ಕೆ ಇಂದು ನಿಗದಿಯಂತೆ ಚುನಾವಣೆ ನಡೆಯಬೇಕಿತ್ತು. ಆದರೆ, ಕನ್ನಡ ಚಿತ್ರರಂಗದ ಮೇರುನಟ ಡಾ ವಿಷ್ಣುವರ್ಧನ್ ಅವರ ಅಕಾಲಿಕ ಮರಣವೇ ವಿಧಾನಸೌಧದಲ್ಲಿ ನಡೆದ ದಾಂಧಲೆಗೆ ಕಾರಣವಾಯಿತು. ಚುನಾವಣೆ ಪ್ರಕ್ರಿಯೆಗಳು ಎಲ್ಲ ಮುಗಿದಿವೆ. ಸ್ಪೀಕರ್ ಚುನಾವಣೆ ನಂತರ ಕಲಾಪ ಮುಂದೂಡುವುದಾಗಿ ಯೋಜನೆ ಆಡಳಿತ ಪಕ್ಷದ್ದಾದರೆ, ಮೇರು ನಟ ನಿಧನರಾಗಿದ್ದಾರೆ, ಹೀಗಾಗಿ ಚುನಾವಣೆ ನಡೆಸುವುದು ಬೇಡ. ಇವತ್ತಿನ ಬದಲಿಗೆ ನಾಳೆ ಚುನಾವಣೆ ನಡೆಸಿದರಾಯಿತು ಎಂಬುದು ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಿಲುವು. ಈ ಕಾರಣದಿಂದ ಸದನ ರಣರಂಗವಾಯಿತು.
ಚುನಾವಣೆ ನಡೆಸಕೂಡದು ಎಂದು ಸರಕಾರದ ಕ್ರಮ ವಿರೋಧಿಸಿದ ಪ್ರತಿಪಕ್ಷಗಳ ಶಾಸಕರು ಬಾವಿಗಿಳಿದು ಪ್ರತಿಭಟನೆ ಆರಂಭಿಸಿದರು. ಒಂದು ಹಂತದಲ್ಲಿ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಅವರು ಸ್ಪೀಕರ್ ಮುಂದಿದ್ದ ಮೈಕ್ ನ್ನು ಕಿತ್ತು ಬಿಸಾಡಿ ಕೂಗಾಟ ಆರಂಭಿಸಿದರು. ಆಗ ಮಾತಿನ ಚಟಮಕಿ ನಡೆಯಿತು. ಕೈಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ಇದು ಯಾವುದನ್ನು ಲೆಕ್ಕಿಸದ ಸರಕಾರ ಸ್ಪೀಕರ್ ಚುನಾವಣೆ ನಡೆಯಿತು. ಅಂತಿಮವಾಗಿ ಕೆ ಜಿ ಬೋಪಯ್ಯ ಅವರು ಸ್ಪೀಕರ್ ಆಗಿ ಆಯ್ಕೆಯಾದರು.
ಇಂದು ಸದನದಲ್ಲಿ ಪ್ರತಿಪಕ್ಷಗಳು ನಡೆದುಕೊಂಡ ರೀತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಲಿನ ಭಯ ಹಾಗೂ ಹತಾಶೆ ಮನೋಭಾವದ ಕೆಲಸ ಎಂದು ಅವರು ಟೀಕಿಸಿದ್ದಾರೆ. ಪ್ರತಿಯಾಗಿ ಮಾತನಾಡಿರುವ ಸಿದ್ಧರಾಮಯ್ಯ, ಸರಕಾರ ದುರುಳ ವರ್ತನೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications