ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಪಕ್ಷಗಳ ಗೂಂಡಾ ವರ್ತನೆ : ಸಿಎಂ ಯಡಿಯೂರಪ್ಪ

By Staff
|
Google Oneindia Kannada News

Yeddyurappa
ಬೆಂಗಳೂರು, ಡಿ. 31 : ವಿಧಾನಸಭಾಧ್ಯಕ್ಷ ಚುನಾವಣೆ ವೇಳೆ ಸದನದಲ್ಲಿ ಪ್ರತಿಪಕ್ಷದ ಸದಸ್ಯರ ವರ್ತನೆಯನ್ನು ಗೂಂಡಾ ವರ್ತನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಮಾತನಾಡಿದ ಅವರು, ಕಳೆದ ಮೂರು ದಶಕಗಳಲ್ಲಿ ಕಂಡರಿಯದ ಘಟನೆ ವಿಧಾನಸಭೆಯಲ್ಲಿ ನಡೆದಿದ್ದು, ಪ್ರತಿಪಕ್ಷ ಸದಸ್ಯರು ತಮಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದರು. ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. ಸೋಲಿನ ಭೀತಿಯಿಂದ ಮುಂದಾಗಬಹುದಾದ ಮುಖಭಂಗ ತಪ್ಪಿಸಿಕೊಳ್ಳುವ ದೃಷ್ಟಿಯಿಂದ ಹತಾಶರಾಗಿ ದಾಂಧಲೆ ನಡೆಸಿದರು. ವಿಧಾನ ಮಂಡಲದ ಇತಿಹಾಸದಲ್ಲಿ ಕೇಳರಿಯದ ಘಟನೆ ಇದಾಗಿದ್ದು ಸ್ಪೀಕರ್ ಮೇಲೆ ಕಾಗದವನ್ನು ಹರಿದೆಸೆದು ಕಡತಗಳನ್ನು ಕಸಿಯಲು ಯತ್ನಿಸಿದ ಘಟನೆ ಖಂಡನೀಯ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X