ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಜೆಪಿ ಸರಕಾರ ನೈತಿಕವಾಗಿ ದಿವಾಳಿ, ಸಂಸದ ಅನಂತಕುಮಾರ್
ರಾಜ್ಯ ಸರಕಾರದಲ್ಲಿ ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷವನ್ನು ಕಟ್ಟಿ ಬೆಳೆಸಿದ ಶಾಸಕರು, ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಎಲ್ಲಿಂದಲೋ ಬಂದವರಿಗೆ ಮಣೆ ಹಾಕುತ್ತಿರುವುದು ಸರಿಯಲ್ಲ. ವಲಸೆ ಬಂದವರಿಗೆ ಸಚಿವ ಸ್ಥಾನ ನೀಡಿರುವುದು ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ. ಈ ವರ್ತನೆಯೇ ಮುಂದೆ ಪಕ್ಷಕ್ಕೆ ಅಪಾಯ ತರಬಹುದು. ಸರಕಾರವನ್ನು ಭದ್ರಗೊಳಿಸಲು ಹೋಗಿ ಪಕ್ಷವನ್ನು ಅಭದ್ರ ಹಾಗೂ ಅಶಿಸ್ತಿಗೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಎಂ ಪಿ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಿರುವದಕ್ಕೂ ವಿರೋಧಿಸಿದ ಅವರು, ಪಕ್ಷದ ಶಾಸಕರ ಮನವಿ ಹಾಗೂ ಒತ್ತಾಯವನ್ನು ಕಡೆಗಣಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಾದರೂ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವುದು ಒಳ್ಳೆಯದು ಎಂದು ಅನಂತಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
Comments
Story first published: Saturday, January 2, 2010, 17:55 [IST]