ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜನವರಿ 5ರ ವರೆಗೆ ನಗರದಲ್ಲಿ ಪುಸ್ತಕ ಮೇಳ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರವು ಕಳೆದ ಬಾರಿ ಏರ್ಪಡಿಸಿದ ಪುಸ್ತಕ ಮೇಳದ ಯಶಸ್ಸಿನಿಂದ ಪ್ರೇರಿತರಾಗಿ ಓದುಗರಿಗೆ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ನೀಡುವ ಉದ್ದೇಶದಿಂದ ಈ ಪುಸ್ತಕ ಮೇಳವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಜಿ. ಸಿದ್ದಲಿಂಗಯ್ಯ ಅವರು ಮಾತನಾಡಿ, ರಾಜ್ಯದ ಆಯ್ದ 70 ಪ್ರಕಾಶಕರು ಈ ಪುಸ್ತಕ ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಳೆದ ಬಾರಿ ಪುಸ್ತಕ ಮೇಳದಲ್ಲಿ ಸುಮಾರು 80 ಲಕ್ಷ ರೂಪಾಯಿ ವಹಿವಾಟು ನಡೆದಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ವಹಿವಾಟು ನಡೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ, ಕುವೆಂಪು ಭಾಷಾ ಭಾರತಿಯ ಅಧ್ಯಕ್ಷ ಡಾ. ಪ್ರಧಾನ್ ಗುರುದತ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments
ಬೆಂಗಳೂರು ರವೀಂದ್ರ ಕಲಾಕ್ಷೇತ್ರ tn seetharam ravindra kalakshetra manu baligar ಟಿಎನ್ ಸೀತಾರಾಮ್ ಸಿದ್ದಲಿಂಗಯ್ಯ siddalingaiah ಕನ್ನಡ ಭವನ kannada book authority ಪುಸ್ತಕ ಮೇಳ
Story first published: Sunday, January 3, 2010, 12:37 [IST]