ಗದಗದಲ್ಲಿ ಫೆ.5ರಿಂದ ಕನ್ನಡ ಸಾಹಿತ್ಯ ಸಮ್ಮೇಳನ

Sriramulu
ಗದಗ, ಜ. 4 : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5, 6 ಮತ್ತು 7ರಂದು ನಗರದಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ಗದಗ್ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರಿರಾಮುಲು ಹೇಳಿದ್ದಾರೆ.

ಸಮ್ಮೇಳನದ ಸ್ವಾಗತ ಸಮಿತಿ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು, ಸಮ್ಮೇಳನಕ್ಕೆ ಗ್ರಾಮ ಪಂಚಾಯತಿ ನೀತಿ ಸಂಹಿತೆ ಅಡ್ಡಿಯಾಗಬಹುದು. ಸಮ್ಮೇಳನ ದಿನಾಂಕದ ನಂತರ ಚುನಾವಣೆ ಅಧಿಸೂಚನೆ ಹೊರಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಅವರ ತಿಳಿಸಿದರು. ಸಮ್ಮೇಳನಕ್ಕೆ 5.96 ಕೋಟಿ ರುಪಾಯಿ ವೆಚ್ಚವಾಗಲಿದೆ. 42 ಉಪಸಮಿತಿಗಳನ್ನು ರಚಿಸಲಾಗಿದೆ. ಮೂರು ವಾರದಲ್ಲಿ ಸಿದ್ಧತೆ ಪೂರ್ಣವಾಗಲಿದೆ ಎಂದು ಶ್ರೀರಾಮಲು ವಿವರಿಸಿದರು.

2009ರ ಡಿಸೆಂಬರ್ 18ರಂದು ನಡೆಯಬೇಕಿದ್ದ ಸಮ್ಮೇಳನ ಉತ್ತರ ಕರ್ನಾಟಕ ನೆರೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಸಮ್ಮೇಳನಕ್ಕೆ ಸರಕಾರ 1.5 ಕೋಟಿ ರುಪಾಯಿ ನೀಡಲಿದೆ. ಜಿಲ್ಲೆಯ ಸರಕಾರಿ ನೌಕರರ ಒಂದು ದಿನ ಸಂಬಳ 65 ಲಕ್ಷ ರುಪಾಯಿ ಆಗುವುದು. ಉಳಿದ ಹಣವನ್ನು ಸ್ಥಳೀಯ ಸಂಸ್ಥೆಗಳು, ನಿಗಮಗಳು ಮತ್ತು ಖಾಸಗಿ ಕಂಪನಿಗಳು ಕಾರ್ಖಾನೆಗಳ ಮೂಲಕ ಪಡೆಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+