ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ : ಮತ್ತೆ ಹಿನ್ನಡೆ

ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ನಿರ್ಧರಿಸಿತ್ತು. ಇದನ್ನು ವಿರೋಧಿಸಿದ ಚೆನ್ನೈ ವಕೀಲ ಆರ್ ಗಾಂಧಿ ಎಂಬುವವರು ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಬಾರದು ಎಂದು ಮದ್ರಾಸ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಶಾಸ್ತ್ರೀಯ ಸ್ಥಾನಮಾನ ನೀಡುವ ಕೇಂದ್ರದ ಕ್ರಮಕ್ಕೆ ತಡೆಯಾಜ್ಞೆ ನೀಡಿತ್ತು.
ಮದ್ರಾಸ್ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಪ್ರಶ್ನಿಸಿ ಆಂಧ್ರಪ್ರದೇಶ ಭಾಷಾ ಆಯೋಗ ಮತ್ತು ಕರ್ನಾಟಕದ ದೀಪಕ್ ತಿಮ್ಮಯ್ಯ ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಾ ಕೆಜಿ ಬಾಲಕೃಷ್ಣನ್ ಹಾಗೂ ನ್ಯಾ. ವಿಎಸ್ ಚವಾಣ್ ವಿಭಾಗೀಯ ಪೀಠ ಮೇಲ್ಮನವಿಯನ್ನು ತಿರಸ್ಕರಿಸಿದೆ.
ಮದ್ರಾಸ್ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ನಿಮ್ಮ ಸಮಸ್ಯೆಯನ್ನು ಮದ್ರಾಸ್ ಹೈಕೋರ್ಟ್ ನಲ್ಲೇ ಬಗೆಹರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದೆ. ಈ ಮೂಲಕ ಕನ್ನಡ ಮತ್ತು ತೆಲುಗು ಭಾಷೆಗಳ ಶಾಸ್ತ್ರೀಯ ಸ್ಥಾನಮಾನದ ಪ್ರಯತ್ನಕ್ಕೆ ಹಿನ್ನಡೆಯುಂಟಾಗಿದೆ. ಕೇಂದ್ರ ಸರಕಾರ ತನ್ನ ಸಚಿವ ಸಂಪುಟದಲ್ಲಿ ಕನ್ನಡ, ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿದೆ. ಆದರೆ, ಮದ್ರಾಸ್ ಹೈಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧ ಎಂದು ಹೇಳಿ ಅಡ್ಡಗೋಡೆ ಮೇಲೆ ದೀಪವಿಟ್ಟಿದೆ.
ತಿರುವಳ್ಳುವರ್ ಪ್ರತಿಮೆ ಅನಾವಣಗೊಳಿಸಿದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು, ಮದ್ರಾಸ್ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ಹಿಂದೆ ಪಡೆಯುವುದಾಗಿ 'ಚಿನ್ನತಂಬಿ' ಯಡಿಯೂರಪ್ಪನವರಿಗೆ ಭರವಸೆ ನೀಡಿದ್ದರು. ಅದು ಇನ್ನೂ ಭರವಸೆಯಾಗಿಯೇ ಉಳಿದಿದೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications